Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...