Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...