Homeಕರ್ನಾಟಕಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

- Advertisement -
- Advertisement -

ಬೆಳ್ತಂಗಡಿಯಲ್ಲಿ 2012ರಲ್ಲಿ ನಡೆದಿದ್ದದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಲಾಸೆಗೊಂಡಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್‌ನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 2023ರ ಜೂನ್‌ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ.ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಈ ಕುರಿತು ವಿಚಾರಣೆ ನಡೆಸುತ್ತಿದ್ದು, ಸಂತೋಷ್‌ ರಾವ್‌ಗೆ ನೊಟೀಸ್ ನೀಡಿದೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು, ಮರು ದಿನ ರಾತ್ರಿ ಮಣ್ಣ ಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಭಾರೀ ಸಂಚಲನವನ್ನು ಮೂಡಿಸಿದ ಈ ಪ್ರಕರಣವನ್ನು ಮೊದಲು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಪ್ರಕರಣದ ಬಗ್ಗೆ ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸಂತೋಷ್ ರಾವ್‌ಗೆ  ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿತ್ತು. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದರು.

ಪ್ರಕರಣದಲ್ಲಿ ಸರಿಯಾದ ತನಿಖೆ ನಡೆದಿಲ್ಲ. ಆದ್ದರಿಂದ ಇಲ್ಲಿ ಸಾಕ್ಷ್ಯಾಧಾರದ ಕೊರತೆ ಎದ್ದು ಕಾಣುತ್ತಿದೆ. ಅತ್ಯಾಚಾರ, ಕೊಲೆ ಆಗಿರುವ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಿಬಿ ಸಂತೋಷ್‌ ತೀರ್ಪು ನೀಡಿದ್ದರು. ಆ ಬಳಿಕ ಸೌಜನ್ಯ ನಿಗೂಢ ಕೊಲೆ ಪ್ರಕರಣದಲ್ಲಿ ಆರೋಪಿಗಳು ಯಾರು ಎನ್ನುವುದು ನಿಗೂಢವಾಗಿಯೇ ಉಳಿದಿದೆ.

2023ರ ಜುಲೈ 16ರಂದು ಈ ಕುರಿತು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯವು, ತನ್ನ ತೀರ್ಪಿನ ವಿರುದ್ಧ 60 ದಿನಗಳ ಒಳಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ, ತೀರ್ಪು ಬಂದು ಈಗಾಗಲೇ 120 ದಿನಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಸಂತೋಷ್ ರಾವ್ ಅವರೇ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದಿಸಿದೆ.

ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಸೌಜನ್ಯ ಪರ ಹೋರಾಟಗಳು ಭುಗಿಲೆದ್ದಿತ್ತು. ಸಂತೋಷ್ ರಾವ್ ನಿರಪರಾಧಿ ಎಂಬುದು ಮೊದಲೇ ಖಾತ್ರಿಯಾಗಿತ್ತು. ಆದರೆ, ನಿಜವಾದ ಅಪರಾಧಿಗಳು ಧರ್ಮಸ್ಥಳದಲ್ಲಿಯೇ ಇದ್ದಾರೆ, ಅವರನ್ನು ಬಂಧಿಸಬೇಕು ಎಂದು ಒತ್ತಾಯಗಳು ಕೇಳಿ ಬಂದಿದ್ದವು. ಕರಾವಳಿಯಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿತ್ತು. ಈ ನಡುವೆ ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚನೆ ನೀಡಬೇಕೆಂದು ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...