Homeಕರ್ನಾಟಕಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆಯಂತಹ ದುಷ್ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್)ಗಳನ್ನು ಕರಡು ಮಾಡಲು ಸಮಿತಿ ರಚನೆಗೆ ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆಯ ವೇಳೆ ನಕಲು ಮಾಡುವ ದುಷ್ಕೃತ್ಯಕ್ಕೆ ಸಂಬಂಧಿಸಿ ಆತ್ಮಹತ್ಯೆ ಘಟನೆಗಳು ನಡೆದ ಕಾರಣಕ್ಕೆ ಸರ್ಕಾರ ಈ ನಿರ್ಧಾಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಪಿಇಎಸ್ ವಿಶ್ವವಿದ್ಯಾಲಯದ 19 ವರ್ಷದ ಬಿ ಟೆಕ್ ವಿದ್ಯಾರ್ಥಿ, ಆದಿತ್ಯ ಪ್ರಭು ಅವರ ಸಾವಿನ ಹಿನ್ನಲೆ ಈ ನಿರ್ಧಾರ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜುಲೈ 2023 ರಲ್ಲಿ ನಡೆದ ಸೆಮಿಸ್ಟರ್ ಪರೀಕ್ಷೆಯ ವೇಳೆ ಆದಿತ್ಯ ಪ್ರಭು “ನಕಲು” ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ನಂತರ ಕಾಲೇಜಿನ ಕಟ್ಟಡದಿಂದ ಹಾರಿ ಜೀವ ಕಳೆದುಕೊಂಡಿದ್ದರು. ಅವರ ಪೋಷಕರು ಕಾಲೇಜಿನ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ವಿದ್ಯಾರ್ಥಿಗೆ ಮಾನಸಿಕ ಕಿರುಕುಳ ನೀಡಲಾಗಿತ್ತು ಎಂಬ ಆರೋಪವನ್ನು ಮಾಡಿದ್ದರು.

ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, SOP ಕರಡು ಸಮಿತಿಯಲ್ಲಿ ಮನಶ್ಶಾಸ್ತ್ರಜ್ಞರು ಮತ್ತು ಉಪಕುಲಪತಿಗಳು ಇರುತ್ತಾರೆ. ಅವರು ಖಾಸಗಿ ಸಂಸ್ಥೆಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವ ಎಸ್‌ಒಪಿಗಳ ಕರಡನ್ನು ರಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

“ಎಸ್‌ಒಪಿಗಳನ್ನು ಮಾನವೀಯತೆಯ ಆಧಾರದ ಮೇಲೆ ರಚಿಸಲಾಗುವುದು ಮತ್ತು ವಿದ್ಯಾರ್ಥಿಗಳು ದುಷ್ಕೃತ್ಯದ ಸಮಯದಲ್ಲಿ ಸಿಕ್ಕಿಬಿದ್ದಾಗ ಅವರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದರ ಕುರಿತು ನಿರ್ವಹಣೆಗೆ ಮಾರ್ಗದರ್ಶನ ನೀಡುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮಹತ್ಯೆ ಪ್ರವೃತ್ತಿಯನ್ನು ಹೊಂದಿರುವುದಿಲ್ಲ. ನಕಲು ನಡೆದಿದೆಯೇ ಎಂಬುದನ್ನು ಮೊದಲು ತನಿಖೆ ಮಾಡುವುದು ಮೂಲಭೂತ ವಿಷಯ. ತನಿಖೆ ವೇಳೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು” ಎಂದು ಸುಧಾಕರ್ ಹೇಳಿದ್ದಾರೆ.

“ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ SOP ಗಳನ್ನು ರಚಿಸಲಾಗುವುದು. ಅವರಿಗೆ ಬೆದರಿಕೆ ಇರುವಂತೆ ಇರಬಾರದು. ಇದು ವಿದ್ಯಾರ್ಥಿಗಳಲ್ಲಿ ನೆಮ್ಮದಿಯ ಭಾವನೆ ಮೂಡಿಸಬೇಕು” ಎಂದು ಸಚಿವ ತಿಳಿಸಿದರು.

ಆದಿತ್ಯ ಪ್ರಭು ಅವರ ಸಾವಿನ ನಂತರ ರಾಜ್ಯ ಸರ್ಕಾರ ರಚಿಸಿದ್ದ 11 ಸದಸ್ಯರ ತಜ್ಞರ ಸಮಿತಿಯ ವರದಿಯನ್ನು ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತು ಪರಿಗಣಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಜಯಕರ್ ಎಸ್.ಎಂ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ವರದಿಯು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಸರಣಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...