Homeಕರ್ನಾಟಕಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

- Advertisement -
- Advertisement -

ಕರ್ನಾಟಕ ಸರ್ಕಾರ ಬುಧವಾರ (ಫೆ.5) ಆಯೋಜಿಸಿದ್ದ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ಹಿಂಪಡೆಯುವಂತೆ ಒತ್ತಾಯಿಸುವ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.

ಸಮಾವೇಶದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್, “ರಾಜ್ಯಗಳು ಯುಜಿಸಿಯ ನಿರ್ಧಾರಕ್ಕಾಗಿ ಕಾಯುತ್ತಿವೆ. ಯುಜಿಸಿಯಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿವೆ ಎಂದಿದ್ದಾರೆ.

“ಯುಜಿಸಿ ಪ್ರಕಟಿಸಿದ ಕರಡು ನಿಯಮಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಈ ಸಂಬಂಧ ರಾಜ್ಯಗಳೊಂದಿಗೆ ಸಭೆ ನಡೆಸಬೇಕು” ಎಂದು ಹೇಳಿದ್ದಾರೆ.

“ಒಕ್ಕೂಟ ವ್ಯವಸ್ಥೆಯನ್ನು ಕಾಪಾಡುವಲ್ಲಿ ಇದು ನಮ್ಮ ಮೊದಲ ಹೆಜ್ಜೆ. ಕೇಂದ್ರದ ವಿರುದ್ದದ ಹೋರಾಟದ ಆರಂಭ. ನಮ್ಮ ಮುಂದಿನ ಹೆಜ್ಜೆ ಯುಜಿಸಿಯ ನಿರ್ಧಾರವನ್ನು ಅವಲಂಬಿಸಿರುತ್ತದೆ. ಯುಜಿಸಿ ನಿಯಂತ್ರಕ ಸಂಸ್ಥೆಯಾಗಿರಬೇಕೇ ಹೊರತು, ಅದು ರಾಜ್ಯಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ”

ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಜಾರ್ಖಂಡ್, ಹಿಮಾಚಲ ಪ್ರದೇಶ ಸೇರಿದಂತೆ ಆರು ರಾಜ್ಯಗಳ ಉನ್ನತ ಶಿಕ್ಷಣ ಸಚಿವರು ಉಪಸ್ಥಿತರಿದ್ದರು. ಆನ್‌ಲೈನ್‌ ವೇದಿಕೆ ಮೂಲಕ ಹಾಜರಾಗಿದ್ದ ಮಹಾರಾಷ್ಟ್ರ ಪ್ರತಿನಿಧಿಯೊಬ್ಬರು ತಾಂತ್ರಿಕ ಸಮಸ್ಯೆಗಳಿಂದಾಗಿ ಸಂಪೂರ್ಣ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

ತುರ್ತು ಸಭೆಗಳ ಕಾರಣಕ್ಕೆ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಸಚಿವರು ತಿಳಿಸಿದ್ದರು. ಸಮಾವೇಶಕ್ಕೆ ಹಾಜರಾಗಬೇಕಿದ್ದ ರಾಜ್ಯಸಭಾ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಜೈರಾಮ್ ರಮೇಶ್ ತಮ್ಮ ಟಿಪ್ಪಣಿಗಳನ್ನು ಕಳುಹಿಸಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕೆಲವು ಪಕ್ಷಗಳು ಕೂಡ ಯುಜಿಸಿ ಕರಡು ನಿಯಮಗಳಿಗೆ ತಮ್ಮ ಆಕ್ಷೇಪಣೆಯನ್ನು ವ್ಯಕ್ತಪಡಿಸಿವೆ. ಟಿಡಿಪಿ, ಜೆಡಿಯು, ಎಲ್‌ಜೆಪಿ ಕರಡಿನ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ನೀಡಿವೆ. ಪಶ್ಚಿಮ ಬಂಗಾಳ ಈ ಕುರಿತು ಪರಿಶೀಲನೆಗೆ ತಜ್ಞರ ಸಮಿತಿಯನ್ನು ರಚಿಸಿದೆ.

“ಯುಜಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ಕರಡು ನಿಯಮಗಳನ್ನು ಪುನರ್ವಿಮರ್ಶೆ ನಡೆಸಿ ಎಲ್ಲಾ ರಾಜ್ಯಗಳನ್ನು ವಿವರವಾದ ಚರ್ಚೆಗೆ ಆಹ್ವಾನಿಸುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ತನ್ನ ಕಾರ್ಯಸೂಚಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಯುಜಿಸಿಯ ಕರಡು ನಿಯಮಗಳು ಶಿಕ್ಷಣ ವ್ಯವಸ್ಥೆಯಲ್ಲಿ ಸಿದ್ಧಾಂತವನ್ನು ಹೇರುವುದರ ಭಾಗವಾಗಿದೆ ಎಂದು ಸುಧಾಕರ್ ಮತ್ತು ಇತರ ರಾಜ್ಯಗಳ ಸಚಿವರು ದೂರಿದ್ದಾರೆ.

ಫೆಬ್ರವರಿ 20ರಂದು ಕೇರಳ ರಾಜ್ಯವು ಇದೇ ರೀತಿಯ ಸಮಾವೇಶವನ್ನು ಆಯೋಜಿಸಲಿದ್ದು, ರಾಜ್ಯಗಳು ಅಲ್ಲಿ ಮುಂದಿನ ಹೆಜ್ಜೆಯನ್ನು ನಿರ್ಧರಿಸುವ ಸಾಧ್ಯತೆಯಿದೆ.

ಸಮಾವೇಶದಲ್ಲಿ ಕೈಗೊಂಡ ನಿರ್ಣಯದ ಪ್ರಮುಖ ಅಂಶಗಳು :

  • ರಾಜ್ಯ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕದಲ್ಲಿ ರಾಜ್ಯಗಳಿಗೆ ಪ್ರಮುಖ ಪಾತ್ರ ನೀಡಬೇಕು.
  • ಕುಲಪತಿ ಆಯ್ಕೆಗೆ ಸಮಿತಿ ರಚಿಸುವ ಅಧಿಕಾರ ಈಗ ಇರುವಂತೆಯೇ ಮುಂದುವರಿಯಬೇಕು
  • ಶೈಕ್ಷಣಿ ವಲಯದ ಹೊರಗಿನವರನ್ನು ಕುಲಪತಿಗಳಾಗಿ ನೇಮಿಸುವುದಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಹಿಂತೆಗೆದುಕೊಳ್ಳಬೇಕು
  • ಈಗಿರುವ ಶಿಕ್ಷಕರ ಕಾರ್ಯಕ್ಷಮತೆ ಮೌಲ್ಯಮಾಪನ ಮತ್ತು ಶೈಕ್ಷಣಿಕ ಸೂಚಕ (ಎಪಿಐ) ವ್ಯವಸ್ಥೆ ತೆಗೆದುಹಾಕಬಾರದು
  • ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಉಪ ನಿಮಯಗಳನ್ನು ಮರು
    ಪರಿಶೀಲಿಸಬೇಕು
  • ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸಿ, ಖಾಸಗಿ ಸಂಸ್ಥೆಗಳಿಗೆ ಉತ್ತೇಜನ ನೀಡುವ ನಿಯಮಗಳನ್ನು ಕೈಬಿಡಬೇಕು
  • ಯುಜಿಸಿ ಮಾರ್ಗಸೂಚಿ ಅನುಸರಿಸದಿದ್ದರೆ ಕೈಗೊಳ್ಳುವ ಕ್ರಮಗಳು ಪ್ರಜಾಸತ್ತಾತ್ಮಕವಾಗಿ ಇರಬೇಕು
  • ಕುಲಪತಿಗಳ ನೇಮಕಾತಿಯ ಅರ್ಹತೆ, ಅವಧಿಯ ಬಗ್ಗೆ ಗಂಭೀರವಾದ ಮರುಪರಿಶೀಲನೆಯ ಅಗತ್ಯವಿದೆ.
  • ಮೂಲ ಪದವಿಪೂರ್ವ ಕೋರ್ಸ್‌ಗೆ ಪ್ರವೇಶ ಪರೀಕ್ಷೆಯನ್ನು ಕಡ್ಡಾಯಗೊಳಿಸುವುದು ಜಿಇಆರ್ ಹೆಚ್ಚಿಸಲು ದೊಡ್ಡ ಅಡಚಣೆಯಾಗಿದೆ.

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...