Homeಮುಖಪುಟಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

- Advertisement -
- Advertisement -

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಘೋಷಣೆಗಳು ಮತ್ತು ಖಾತರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬಂಧಿತ ವ್ಯಕ್ತಿಗಳಿಗೆ ದೊಡ್ಡ ಹಾನಿಯಾಗಿದೆ. ಅತಿ ಬೇಗನೆ ತೆಗೆದುಕೊಳ್ಳುವ ನಿರ್ಧಾರಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಐ ಹೇಳಿದ್ದಾರೆ. ಆದರೂ ಅವರು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲಿಲ್ಲ.

ಪೋಲಿಸರ ಅತಿರೇಕಗಳನ್ನು ನಿಯಂತ್ರಣದಲ್ಲಿಡಲು ನಮ್ಮ ಮುಂದಿರುವ ಮಾರ್ಗವೆಂದರೆ, “ಕಾನೂನು ನೆರವು ಮತ್ತು ಉಚಿತ ಕಾನೂನು ನೆರವು ಸೇವೆಗಳ ಲಭ್ಯತೆಯ ಸಾಂವಿಧಾನಿಕ ಹಕ್ಕಿನ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡುವುದು” ಎಂದು ಅವರು ಸೂಚಿಸಿದರು.

ಕಾನೂನು ಸೇವೆಗಳ ಆ್ಯಪ್ ಬಿಡುಗಡೆ ಅವರು, “ಪ್ರತಿ ಪೊಲೀಸ್ ಠಾಣೆ ಅಥವಾ ಕಾರಾಗೃಹದಲ್ಲಿ ಪ್ರದರ್ಶನ ಫಲಕಗಳು ಮತ್ತು ಬೋರ್ಡ್‌ಗಳನ್ನು ಅಳವಡಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ದೇಶಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವ ಕಾರ್ಯಗಾರಗಳನ್ನು ಸಕ್ರಿಯವಾಗಿ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. “ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಕಾನೂನಿನ ನಿಯಮದಿಂದ ಆಳಲ್ಪಡುವ ಸಮಾಜವಾಗಿ ಉಳಿಯಲು ಬಯಸಿದರೆ, ಹೆಚ್ಚಿನ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಎಲ್ಲಾ ಸಮಯದಲ್ಲೂ, ನಮ್ಮ ರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು “ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದರು.


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದ ಮುಖ್ಯ ನ್ಯಾಯಾಧೀಶರಾದ( CJI) ಇವರು ಈ ರೀತಿಯಿಂದ ವ್ಯಕ್ತಪಡಿಸಿದ್ದು ವಿಪರ್ಯಾಸವಾದರೂ ಸತ್ಯ ಇನ್ನಾದರೂ ಈ ರೀತಿ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು
    ಭಾರತ ದೇಶದ ಸಂವಿಧಾನದ ಉದ್ದೇಶವಾದ ಸರ್ವೇ ಜನ ಸುಖಿನೋ ಭವಂತು ಉದ್ದೇಶಕ್ಕಾಗಿ ರಚಿಸಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಕೊಡುವಂತೆ ಆಗಬೇಕೆಂದು ಕೇಳಿಕೊಳ್ಳುತ್ತೇನೆ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...