Homeಮುಖಪುಟಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

- Advertisement -
- Advertisement -

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಘೋಷಣೆಗಳು ಮತ್ತು ಖಾತರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬಂಧಿತ ವ್ಯಕ್ತಿಗಳಿಗೆ ದೊಡ್ಡ ಹಾನಿಯಾಗಿದೆ. ಅತಿ ಬೇಗನೆ ತೆಗೆದುಕೊಳ್ಳುವ ನಿರ್ಧಾರಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಐ ಹೇಳಿದ್ದಾರೆ. ಆದರೂ ಅವರು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲಿಲ್ಲ.

ಪೋಲಿಸರ ಅತಿರೇಕಗಳನ್ನು ನಿಯಂತ್ರಣದಲ್ಲಿಡಲು ನಮ್ಮ ಮುಂದಿರುವ ಮಾರ್ಗವೆಂದರೆ, “ಕಾನೂನು ನೆರವು ಮತ್ತು ಉಚಿತ ಕಾನೂನು ನೆರವು ಸೇವೆಗಳ ಲಭ್ಯತೆಯ ಸಾಂವಿಧಾನಿಕ ಹಕ್ಕಿನ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡುವುದು” ಎಂದು ಅವರು ಸೂಚಿಸಿದರು.

ಕಾನೂನು ಸೇವೆಗಳ ಆ್ಯಪ್ ಬಿಡುಗಡೆ ಅವರು, “ಪ್ರತಿ ಪೊಲೀಸ್ ಠಾಣೆ ಅಥವಾ ಕಾರಾಗೃಹದಲ್ಲಿ ಪ್ರದರ್ಶನ ಫಲಕಗಳು ಮತ್ತು ಬೋರ್ಡ್‌ಗಳನ್ನು ಅಳವಡಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ದೇಶಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವ ಕಾರ್ಯಗಾರಗಳನ್ನು ಸಕ್ರಿಯವಾಗಿ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. “ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಕಾನೂನಿನ ನಿಯಮದಿಂದ ಆಳಲ್ಪಡುವ ಸಮಾಜವಾಗಿ ಉಳಿಯಲು ಬಯಸಿದರೆ, ಹೆಚ್ಚಿನ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಎಲ್ಲಾ ಸಮಯದಲ್ಲೂ, ನಮ್ಮ ರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು “ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದರು.


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದ ಮುಖ್ಯ ನ್ಯಾಯಾಧೀಶರಾದ( CJI) ಇವರು ಈ ರೀತಿಯಿಂದ ವ್ಯಕ್ತಪಡಿಸಿದ್ದು ವಿಪರ್ಯಾಸವಾದರೂ ಸತ್ಯ ಇನ್ನಾದರೂ ಈ ರೀತಿ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು
    ಭಾರತ ದೇಶದ ಸಂವಿಧಾನದ ಉದ್ದೇಶವಾದ ಸರ್ವೇ ಜನ ಸುಖಿನೋ ಭವಂತು ಉದ್ದೇಶಕ್ಕಾಗಿ ರಚಿಸಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಕೊಡುವಂತೆ ಆಗಬೇಕೆಂದು ಕೇಳಿಕೊಳ್ಳುತ್ತೇನೆ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...