Homeಮುಖಪುಟಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

- Advertisement -
- Advertisement -

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಘೋಷಣೆಗಳು ಮತ್ತು ಖಾತರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬಂಧಿತ ವ್ಯಕ್ತಿಗಳಿಗೆ ದೊಡ್ಡ ಹಾನಿಯಾಗಿದೆ. ಅತಿ ಬೇಗನೆ ತೆಗೆದುಕೊಳ್ಳುವ ನಿರ್ಧಾರಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಐ ಹೇಳಿದ್ದಾರೆ. ಆದರೂ ಅವರು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲಿಲ್ಲ.

ಪೋಲಿಸರ ಅತಿರೇಕಗಳನ್ನು ನಿಯಂತ್ರಣದಲ್ಲಿಡಲು ನಮ್ಮ ಮುಂದಿರುವ ಮಾರ್ಗವೆಂದರೆ, “ಕಾನೂನು ನೆರವು ಮತ್ತು ಉಚಿತ ಕಾನೂನು ನೆರವು ಸೇವೆಗಳ ಲಭ್ಯತೆಯ ಸಾಂವಿಧಾನಿಕ ಹಕ್ಕಿನ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡುವುದು” ಎಂದು ಅವರು ಸೂಚಿಸಿದರು.

ಕಾನೂನು ಸೇವೆಗಳ ಆ್ಯಪ್ ಬಿಡುಗಡೆ ಅವರು, “ಪ್ರತಿ ಪೊಲೀಸ್ ಠಾಣೆ ಅಥವಾ ಕಾರಾಗೃಹದಲ್ಲಿ ಪ್ರದರ್ಶನ ಫಲಕಗಳು ಮತ್ತು ಬೋರ್ಡ್‌ಗಳನ್ನು ಅಳವಡಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ದೇಶಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವ ಕಾರ್ಯಗಾರಗಳನ್ನು ಸಕ್ರಿಯವಾಗಿ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. “ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಕಾನೂನಿನ ನಿಯಮದಿಂದ ಆಳಲ್ಪಡುವ ಸಮಾಜವಾಗಿ ಉಳಿಯಲು ಬಯಸಿದರೆ, ಹೆಚ್ಚಿನ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಎಲ್ಲಾ ಸಮಯದಲ್ಲೂ, ನಮ್ಮ ರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು “ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದರು.


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದ ಮುಖ್ಯ ನ್ಯಾಯಾಧೀಶರಾದ( CJI) ಇವರು ಈ ರೀತಿಯಿಂದ ವ್ಯಕ್ತಪಡಿಸಿದ್ದು ವಿಪರ್ಯಾಸವಾದರೂ ಸತ್ಯ ಇನ್ನಾದರೂ ಈ ರೀತಿ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು
    ಭಾರತ ದೇಶದ ಸಂವಿಧಾನದ ಉದ್ದೇಶವಾದ ಸರ್ವೇ ಜನ ಸುಖಿನೋ ಭವಂತು ಉದ್ದೇಶಕ್ಕಾಗಿ ರಚಿಸಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಕೊಡುವಂತೆ ಆಗಬೇಕೆಂದು ಕೇಳಿಕೊಳ್ಳುತ್ತೇನೆ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...