Homeಮುಖಪುಟ12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

- Advertisement -
- Advertisement -

ಭಾರತದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ. 14.23ಕ್ಕೆ ಏರಿದೆ. ತೈಲ, ಕಚ್ಚಾ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳ ಹೆಚ್ಚಳದಿಂದಾಗಿ ಸಗಟು ಹಣದುಬ್ಬರವು 12 ವರ್ಷಗಳಲ್ಲಿ ಗರಿಷ್ಠ ಮಟ್ಟದಲ್ಲಿ ದಾಖಲಾಗಿದೆ ಎಂದು ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ದರವು ಶೇ. 12.54ರಷ್ಟಿತ್ತು.

ಸಗಟು ಮಾರುಕಟ್ಟೆಗಳಲ್ಲಿನ ಬೆಲೆ ಏರಿಕೆ ಸೂಚ್ಯಂಕವು ಸತತ ಎಂಟನೇ ತಿಂಗಳಿನಲ್ಲಿ ಎರಡಂಕಿಯಲ್ಲೇ ಉಳಿದಿದೆ. ಹಣದುಬ್ಬರಕ್ಕೆ ಕಾರಣವಾದ ಇತರ ಉತ್ಪನ್ನಗಳಲ್ಲಿ ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿವೆ.

ಆಹಾರ ಸೂಚ್ಯಂಕವು ಅಕ್ಟೋಬರ್‌ನಲ್ಲಿ ಶೇ. 3.06ರಲ್ಲಿತ್ತು. ನವೆಂಬರ್‌ನಲ್ಲಿ ಶೇ. 6.70ಕ್ಕೆ ತೀವ್ರವಾಗಿ ಏರಿಕೆ ಕಂಡಿದೆ. ಇಂಧನ ಮತ್ತು ಶಕ್ತಿಯ ಸಗಟು ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ.37.18 ರಷ್ಟಿತ್ತು. ನವೆಂಬರ್‌ನಲ್ಲಿ ಶೇ.39.81ಕ್ಕೆ ಏರಿದೆ.

ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 80.57 ಇತ್ತು. ನವೆಂಬರ್‌ನಲ್ಲಿ ಶೇ. 91.74 ರಷ್ಟಿದೆ. ನವೆಂಬರ್‌ನಲ್ಲಿನ ಚಿಲ್ಲರೆ ಹಣದುಬ್ಬರದ ಅಂಕಿಅಂಶಗಳನ್ನು ಕೇಂದ್ರ ಸರ್ಕಾರವು ಸೋಮವಾರ ಬಿಡುಗಡೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಶೇ.4.48ರಷ್ಟಿದ್ದ ಚಿಲ್ಲರೆ ಹಣದುಬ್ಬರ ನವೆಂಬರ್‌‌ನಲ್ಲಿ ಶೇ. 4.91ಕ್ಕೆ ಏರಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಆಹಾರ, ಪಾನೀಯಗಳು, ಬಟ್ಟೆ, ಪಾದರಕ್ಷೆಗಳು, ವಸತಿ ಬೆಲೆಗಳಲ್ಲಿನ ಚಿಲ್ಲರೆ ಹಣದುಬ್ಬರವು ತಿಂಗಳ ಅವಧಿಯಲ್ಲಿ ಹೆಚ್ಚಾಯಿತು. ತರಕಾರಿ ಬೆಲೆಯು ತೀವ್ರವಾಗಿ ಏರಿತು. ಆಹಾರ ಮತ್ತು ಪಾನೀಯಗಳಲ್ಲಿನ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 1.8ರಷ್ಟಿದ್ದದ್ದು ಈಗ ಶೇ.2.6ರಷ್ಟಾಗಿದೆ.

ಏನಿದು ಹಣದುಬ್ಬರ?

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅಂದರ ಏನು?

ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, “ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು” ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.


ಇದನ್ನೂ ಓದಿರಿ: ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...