Homeಮುಖಪುಟ12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

- Advertisement -
- Advertisement -

ಭಾರತದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ. 14.23ಕ್ಕೆ ಏರಿದೆ. ತೈಲ, ಕಚ್ಚಾ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳ ಹೆಚ್ಚಳದಿಂದಾಗಿ ಸಗಟು ಹಣದುಬ್ಬರವು 12 ವರ್ಷಗಳಲ್ಲಿ ಗರಿಷ್ಠ ಮಟ್ಟದಲ್ಲಿ ದಾಖಲಾಗಿದೆ ಎಂದು ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ದರವು ಶೇ. 12.54ರಷ್ಟಿತ್ತು.

ಸಗಟು ಮಾರುಕಟ್ಟೆಗಳಲ್ಲಿನ ಬೆಲೆ ಏರಿಕೆ ಸೂಚ್ಯಂಕವು ಸತತ ಎಂಟನೇ ತಿಂಗಳಿನಲ್ಲಿ ಎರಡಂಕಿಯಲ್ಲೇ ಉಳಿದಿದೆ. ಹಣದುಬ್ಬರಕ್ಕೆ ಕಾರಣವಾದ ಇತರ ಉತ್ಪನ್ನಗಳಲ್ಲಿ ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿವೆ.

ಆಹಾರ ಸೂಚ್ಯಂಕವು ಅಕ್ಟೋಬರ್‌ನಲ್ಲಿ ಶೇ. 3.06ರಲ್ಲಿತ್ತು. ನವೆಂಬರ್‌ನಲ್ಲಿ ಶೇ. 6.70ಕ್ಕೆ ತೀವ್ರವಾಗಿ ಏರಿಕೆ ಕಂಡಿದೆ. ಇಂಧನ ಮತ್ತು ಶಕ್ತಿಯ ಸಗಟು ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ.37.18 ರಷ್ಟಿತ್ತು. ನವೆಂಬರ್‌ನಲ್ಲಿ ಶೇ.39.81ಕ್ಕೆ ಏರಿದೆ.

ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 80.57 ಇತ್ತು. ನವೆಂಬರ್‌ನಲ್ಲಿ ಶೇ. 91.74 ರಷ್ಟಿದೆ. ನವೆಂಬರ್‌ನಲ್ಲಿನ ಚಿಲ್ಲರೆ ಹಣದುಬ್ಬರದ ಅಂಕಿಅಂಶಗಳನ್ನು ಕೇಂದ್ರ ಸರ್ಕಾರವು ಸೋಮವಾರ ಬಿಡುಗಡೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಶೇ.4.48ರಷ್ಟಿದ್ದ ಚಿಲ್ಲರೆ ಹಣದುಬ್ಬರ ನವೆಂಬರ್‌‌ನಲ್ಲಿ ಶೇ. 4.91ಕ್ಕೆ ಏರಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಆಹಾರ, ಪಾನೀಯಗಳು, ಬಟ್ಟೆ, ಪಾದರಕ್ಷೆಗಳು, ವಸತಿ ಬೆಲೆಗಳಲ್ಲಿನ ಚಿಲ್ಲರೆ ಹಣದುಬ್ಬರವು ತಿಂಗಳ ಅವಧಿಯಲ್ಲಿ ಹೆಚ್ಚಾಯಿತು. ತರಕಾರಿ ಬೆಲೆಯು ತೀವ್ರವಾಗಿ ಏರಿತು. ಆಹಾರ ಮತ್ತು ಪಾನೀಯಗಳಲ್ಲಿನ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 1.8ರಷ್ಟಿದ್ದದ್ದು ಈಗ ಶೇ.2.6ರಷ್ಟಾಗಿದೆ.

ಏನಿದು ಹಣದುಬ್ಬರ?

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅಂದರ ಏನು?

ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, “ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು” ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.


ಇದನ್ನೂ ಓದಿರಿ: ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...