Homeಮುಖಪುಟ12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

- Advertisement -
- Advertisement -

ಭಾರತದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ. 14.23ಕ್ಕೆ ಏರಿದೆ. ತೈಲ, ಕಚ್ಚಾ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳ ಹೆಚ್ಚಳದಿಂದಾಗಿ ಸಗಟು ಹಣದುಬ್ಬರವು 12 ವರ್ಷಗಳಲ್ಲಿ ಗರಿಷ್ಠ ಮಟ್ಟದಲ್ಲಿ ದಾಖಲಾಗಿದೆ ಎಂದು ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ದರವು ಶೇ. 12.54ರಷ್ಟಿತ್ತು.

ಸಗಟು ಮಾರುಕಟ್ಟೆಗಳಲ್ಲಿನ ಬೆಲೆ ಏರಿಕೆ ಸೂಚ್ಯಂಕವು ಸತತ ಎಂಟನೇ ತಿಂಗಳಿನಲ್ಲಿ ಎರಡಂಕಿಯಲ್ಲೇ ಉಳಿದಿದೆ. ಹಣದುಬ್ಬರಕ್ಕೆ ಕಾರಣವಾದ ಇತರ ಉತ್ಪನ್ನಗಳಲ್ಲಿ ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿವೆ.

ಆಹಾರ ಸೂಚ್ಯಂಕವು ಅಕ್ಟೋಬರ್‌ನಲ್ಲಿ ಶೇ. 3.06ರಲ್ಲಿತ್ತು. ನವೆಂಬರ್‌ನಲ್ಲಿ ಶೇ. 6.70ಕ್ಕೆ ತೀವ್ರವಾಗಿ ಏರಿಕೆ ಕಂಡಿದೆ. ಇಂಧನ ಮತ್ತು ಶಕ್ತಿಯ ಸಗಟು ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ.37.18 ರಷ್ಟಿತ್ತು. ನವೆಂಬರ್‌ನಲ್ಲಿ ಶೇ.39.81ಕ್ಕೆ ಏರಿದೆ.

ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 80.57 ಇತ್ತು. ನವೆಂಬರ್‌ನಲ್ಲಿ ಶೇ. 91.74 ರಷ್ಟಿದೆ. ನವೆಂಬರ್‌ನಲ್ಲಿನ ಚಿಲ್ಲರೆ ಹಣದುಬ್ಬರದ ಅಂಕಿಅಂಶಗಳನ್ನು ಕೇಂದ್ರ ಸರ್ಕಾರವು ಸೋಮವಾರ ಬಿಡುಗಡೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಶೇ.4.48ರಷ್ಟಿದ್ದ ಚಿಲ್ಲರೆ ಹಣದುಬ್ಬರ ನವೆಂಬರ್‌‌ನಲ್ಲಿ ಶೇ. 4.91ಕ್ಕೆ ಏರಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಆಹಾರ, ಪಾನೀಯಗಳು, ಬಟ್ಟೆ, ಪಾದರಕ್ಷೆಗಳು, ವಸತಿ ಬೆಲೆಗಳಲ್ಲಿನ ಚಿಲ್ಲರೆ ಹಣದುಬ್ಬರವು ತಿಂಗಳ ಅವಧಿಯಲ್ಲಿ ಹೆಚ್ಚಾಯಿತು. ತರಕಾರಿ ಬೆಲೆಯು ತೀವ್ರವಾಗಿ ಏರಿತು. ಆಹಾರ ಮತ್ತು ಪಾನೀಯಗಳಲ್ಲಿನ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 1.8ರಷ್ಟಿದ್ದದ್ದು ಈಗ ಶೇ.2.6ರಷ್ಟಾಗಿದೆ.

ಏನಿದು ಹಣದುಬ್ಬರ?

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅಂದರ ಏನು?

ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, “ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು” ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.


ಇದನ್ನೂ ಓದಿರಿ: ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...