Homeಮುಖಪುಟ12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

- Advertisement -
- Advertisement -

ಭಾರತದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ. 14.23ಕ್ಕೆ ಏರಿದೆ. ತೈಲ, ಕಚ್ಚಾ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳ ಹೆಚ್ಚಳದಿಂದಾಗಿ ಸಗಟು ಹಣದುಬ್ಬರವು 12 ವರ್ಷಗಳಲ್ಲಿ ಗರಿಷ್ಠ ಮಟ್ಟದಲ್ಲಿ ದಾಖಲಾಗಿದೆ ಎಂದು ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ದರವು ಶೇ. 12.54ರಷ್ಟಿತ್ತು.

ಸಗಟು ಮಾರುಕಟ್ಟೆಗಳಲ್ಲಿನ ಬೆಲೆ ಏರಿಕೆ ಸೂಚ್ಯಂಕವು ಸತತ ಎಂಟನೇ ತಿಂಗಳಿನಲ್ಲಿ ಎರಡಂಕಿಯಲ್ಲೇ ಉಳಿದಿದೆ. ಹಣದುಬ್ಬರಕ್ಕೆ ಕಾರಣವಾದ ಇತರ ಉತ್ಪನ್ನಗಳಲ್ಲಿ ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿವೆ.

ಆಹಾರ ಸೂಚ್ಯಂಕವು ಅಕ್ಟೋಬರ್‌ನಲ್ಲಿ ಶೇ. 3.06ರಲ್ಲಿತ್ತು. ನವೆಂಬರ್‌ನಲ್ಲಿ ಶೇ. 6.70ಕ್ಕೆ ತೀವ್ರವಾಗಿ ಏರಿಕೆ ಕಂಡಿದೆ. ಇಂಧನ ಮತ್ತು ಶಕ್ತಿಯ ಸಗಟು ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ.37.18 ರಷ್ಟಿತ್ತು. ನವೆಂಬರ್‌ನಲ್ಲಿ ಶೇ.39.81ಕ್ಕೆ ಏರಿದೆ.

ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 80.57 ಇತ್ತು. ನವೆಂಬರ್‌ನಲ್ಲಿ ಶೇ. 91.74 ರಷ್ಟಿದೆ. ನವೆಂಬರ್‌ನಲ್ಲಿನ ಚಿಲ್ಲರೆ ಹಣದುಬ್ಬರದ ಅಂಕಿಅಂಶಗಳನ್ನು ಕೇಂದ್ರ ಸರ್ಕಾರವು ಸೋಮವಾರ ಬಿಡುಗಡೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಶೇ.4.48ರಷ್ಟಿದ್ದ ಚಿಲ್ಲರೆ ಹಣದುಬ್ಬರ ನವೆಂಬರ್‌‌ನಲ್ಲಿ ಶೇ. 4.91ಕ್ಕೆ ಏರಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಆಹಾರ, ಪಾನೀಯಗಳು, ಬಟ್ಟೆ, ಪಾದರಕ್ಷೆಗಳು, ವಸತಿ ಬೆಲೆಗಳಲ್ಲಿನ ಚಿಲ್ಲರೆ ಹಣದುಬ್ಬರವು ತಿಂಗಳ ಅವಧಿಯಲ್ಲಿ ಹೆಚ್ಚಾಯಿತು. ತರಕಾರಿ ಬೆಲೆಯು ತೀವ್ರವಾಗಿ ಏರಿತು. ಆಹಾರ ಮತ್ತು ಪಾನೀಯಗಳಲ್ಲಿನ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 1.8ರಷ್ಟಿದ್ದದ್ದು ಈಗ ಶೇ.2.6ರಷ್ಟಾಗಿದೆ.

ಏನಿದು ಹಣದುಬ್ಬರ?

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅಂದರ ಏನು?

ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, “ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು” ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.


ಇದನ್ನೂ ಓದಿರಿ: ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...