Homeಕರ್ನಾಟಕಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಮೂರು ಲಕ್ಷದ 27 ಸಾವಿರ ಕೋಟಿ ರೂಗಳಾಗಿದ್ದು, ಅದರ ಮುಖ್ಯಾಂಶಗಳು ಇಲ್ಲಿವೆ.

  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಗೆ ಮನರೇಗ ಅಡಿಯಲ್ಲಿ ₹ 100 ಕೋಟಿ
  • ಅನುಗ್ರಹ ಯೋಜನೆ ಮರುಜಾರಿ: ಹಸು, ಎಮ್ಮೆ, ಎತ್ತು ಸತ್ತರೆ ₹ 10,000 ಪರಿಹಾರ ಧನ
  • ರೈತರಿಗೆ 3 ಲಕ್ಷದಿಂದ 5 ಲಕ್ಷದವರಗೆ ಶೂನ್ಯ ಬಡ್ಡಿದರದ ಸಾಲ
  • ಸಮಾಜ ಕಲ್ಯಾಣ ಇಲಾಖೆಗೆ ₹ 11,173 ಕೋಟಿ
  • ಕಿರು ಆಹಾರ ಸಂಸ್ಕರಣಾ ಉದ್ದಿಮೆಗೆ ₹ 100 ಕೋಟಿ
  • ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ತಲಾ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
  • ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು

ತುಟ್ಟಿ

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಜಾರಿ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವ ಗುರಿ ಹೊಂದಿದ್ದೇವೆ. ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲಾಖಾವಾರು ಬಜೆಟ್ ಹಂಚಿಕೆ ವಿವರ

  • ಶಿಕ್ಷಣ ಕ್ಷೇತ್ರ- 37 ಸಾವಿರ ಕೋಟಿ ರೂ (ಶೇ 11)
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ- 24 ಸಾವಿರ ಕೋಟಿ ರೂ (ಶೇ 7)
  • ಇಂಧನ- 22 ಸಾವಿರ ಕೋಟಿ ರೂ (ಶೇ 7)
  • ನೀರಾವರಿ-19 ಸಾವಿರ ಕೋಟಿ ರೂ (ಶೇ 6)
  • ಗ್ರಾಮೀಣಾಭಿವೃದ್ಧಿ -18ಸಾವಿರ ಕೋಟಿ ರೂ (ಶೇ 5)
  • ಒಳಾಡಳಿತ ಮತ್ತು ಸಾರಿಗೆ – 16ಸಾವಿರ ಕೋಟಿ (ಶೇ 5)
  • ಕಂದಾಯ- 16 ಸಾವಿರ ಕೋಟಿ (ಶೇ 5)
  • ಆರೋಗ್ಯ ಇಲಾಖೆ- 14 ಸಾವಿರ ಕೋಟಿ ರೂ (ಶೇ 4)
  • ಸಮಾಜ ಕಲ್ಯಾಣ- 11 ಸಾವಿರ ಕೋಟಿ ರೂ (ಶೇ 3)
  • ಲೋಕೋಪಯೋಗಿ ಇಲಾಖೆ- 10ಸಾವಿರ ಕೋಟಿ ರೂ (ಶೇ 3)
  • ಕೃಷಿ ಮತ್ತು ತೋಟಗಾರಿಕೆ 5860 ಕೋಟಿ ರೂ (ಶೇ 2)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ- 3024ಕೋಟಿ ರೂ (ಶೇ 1)
  • ಇತರೆ- 1.09ಲಕ್ಷ ಕೋಟಿ (ಶೇ 32)

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಸ್ವಂತ ತೆರಿಗೆ ವಿವರ

ಒಟ್ಟು ರಾಜಸ್ವ ಸಂಗ್ರಹ- 1.62ಲಕ್ಷ ಕೋಟಿ ರೂ

ವಾಣಿಜ್ಯ ತೆರಿಗೆ- 1ಲಕ್ಷ ಕೋಟಿ ರೂ (ಶೇ 58)

ಅಬಕಾರಿ ತೆರಿಗೆ- 38ಸಾವಿರ ಕೋಟಿ ರೂ (ಶೇ 20)

ನೋಂದಣಿ ಮತ್ತು ಮುದ್ರಾಂಕ 25ಸಾವಿರ ಕೋಟಿ ರೂ (ಶೇ 14)

ಮೋಟಾರು ವಾಹನ 11500 ಕೋಟಿ ರೂ (ಶೇ 7)

ಇತರೆ- 2153 ಕೋಟಿ (ಶೇ 1)

ಇದನ್ನೂ ಓದಿ; ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...