Homeಕರ್ನಾಟಕಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಮೂರು ಲಕ್ಷದ 27 ಸಾವಿರ ಕೋಟಿ ರೂಗಳಾಗಿದ್ದು, ಅದರ ಮುಖ್ಯಾಂಶಗಳು ಇಲ್ಲಿವೆ.

  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಗೆ ಮನರೇಗ ಅಡಿಯಲ್ಲಿ ₹ 100 ಕೋಟಿ
  • ಅನುಗ್ರಹ ಯೋಜನೆ ಮರುಜಾರಿ: ಹಸು, ಎಮ್ಮೆ, ಎತ್ತು ಸತ್ತರೆ ₹ 10,000 ಪರಿಹಾರ ಧನ
  • ರೈತರಿಗೆ 3 ಲಕ್ಷದಿಂದ 5 ಲಕ್ಷದವರಗೆ ಶೂನ್ಯ ಬಡ್ಡಿದರದ ಸಾಲ
  • ಸಮಾಜ ಕಲ್ಯಾಣ ಇಲಾಖೆಗೆ ₹ 11,173 ಕೋಟಿ
  • ಕಿರು ಆಹಾರ ಸಂಸ್ಕರಣಾ ಉದ್ದಿಮೆಗೆ ₹ 100 ಕೋಟಿ
  • ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ತಲಾ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
  • ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು

ತುಟ್ಟಿ

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಜಾರಿ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವ ಗುರಿ ಹೊಂದಿದ್ದೇವೆ. ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲಾಖಾವಾರು ಬಜೆಟ್ ಹಂಚಿಕೆ ವಿವರ

  • ಶಿಕ್ಷಣ ಕ್ಷೇತ್ರ- 37 ಸಾವಿರ ಕೋಟಿ ರೂ (ಶೇ 11)
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ- 24 ಸಾವಿರ ಕೋಟಿ ರೂ (ಶೇ 7)
  • ಇಂಧನ- 22 ಸಾವಿರ ಕೋಟಿ ರೂ (ಶೇ 7)
  • ನೀರಾವರಿ-19 ಸಾವಿರ ಕೋಟಿ ರೂ (ಶೇ 6)
  • ಗ್ರಾಮೀಣಾಭಿವೃದ್ಧಿ -18ಸಾವಿರ ಕೋಟಿ ರೂ (ಶೇ 5)
  • ಒಳಾಡಳಿತ ಮತ್ತು ಸಾರಿಗೆ – 16ಸಾವಿರ ಕೋಟಿ (ಶೇ 5)
  • ಕಂದಾಯ- 16 ಸಾವಿರ ಕೋಟಿ (ಶೇ 5)
  • ಆರೋಗ್ಯ ಇಲಾಖೆ- 14 ಸಾವಿರ ಕೋಟಿ ರೂ (ಶೇ 4)
  • ಸಮಾಜ ಕಲ್ಯಾಣ- 11 ಸಾವಿರ ಕೋಟಿ ರೂ (ಶೇ 3)
  • ಲೋಕೋಪಯೋಗಿ ಇಲಾಖೆ- 10ಸಾವಿರ ಕೋಟಿ ರೂ (ಶೇ 3)
  • ಕೃಷಿ ಮತ್ತು ತೋಟಗಾರಿಕೆ 5860 ಕೋಟಿ ರೂ (ಶೇ 2)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ- 3024ಕೋಟಿ ರೂ (ಶೇ 1)
  • ಇತರೆ- 1.09ಲಕ್ಷ ಕೋಟಿ (ಶೇ 32)

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಸ್ವಂತ ತೆರಿಗೆ ವಿವರ

ಒಟ್ಟು ರಾಜಸ್ವ ಸಂಗ್ರಹ- 1.62ಲಕ್ಷ ಕೋಟಿ ರೂ

ವಾಣಿಜ್ಯ ತೆರಿಗೆ- 1ಲಕ್ಷ ಕೋಟಿ ರೂ (ಶೇ 58)

ಅಬಕಾರಿ ತೆರಿಗೆ- 38ಸಾವಿರ ಕೋಟಿ ರೂ (ಶೇ 20)

ನೋಂದಣಿ ಮತ್ತು ಮುದ್ರಾಂಕ 25ಸಾವಿರ ಕೋಟಿ ರೂ (ಶೇ 14)

ಮೋಟಾರು ವಾಹನ 11500 ಕೋಟಿ ರೂ (ಶೇ 7)

ಇತರೆ- 2153 ಕೋಟಿ (ಶೇ 1)

ಇದನ್ನೂ ಓದಿ; ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...