Homeಕರ್ನಾಟಕಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಮೂರು ಲಕ್ಷದ 27 ಸಾವಿರ ಕೋಟಿ ರೂಗಳಾಗಿದ್ದು, ಅದರ ಮುಖ್ಯಾಂಶಗಳು ಇಲ್ಲಿವೆ.

  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಗೆ ಮನರೇಗ ಅಡಿಯಲ್ಲಿ ₹ 100 ಕೋಟಿ
  • ಅನುಗ್ರಹ ಯೋಜನೆ ಮರುಜಾರಿ: ಹಸು, ಎಮ್ಮೆ, ಎತ್ತು ಸತ್ತರೆ ₹ 10,000 ಪರಿಹಾರ ಧನ
  • ರೈತರಿಗೆ 3 ಲಕ್ಷದಿಂದ 5 ಲಕ್ಷದವರಗೆ ಶೂನ್ಯ ಬಡ್ಡಿದರದ ಸಾಲ
  • ಸಮಾಜ ಕಲ್ಯಾಣ ಇಲಾಖೆಗೆ ₹ 11,173 ಕೋಟಿ
  • ಕಿರು ಆಹಾರ ಸಂಸ್ಕರಣಾ ಉದ್ದಿಮೆಗೆ ₹ 100 ಕೋಟಿ
  • ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ತಲಾ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
  • ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು

ತುಟ್ಟಿ

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಜಾರಿ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವ ಗುರಿ ಹೊಂದಿದ್ದೇವೆ. ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲಾಖಾವಾರು ಬಜೆಟ್ ಹಂಚಿಕೆ ವಿವರ

  • ಶಿಕ್ಷಣ ಕ್ಷೇತ್ರ- 37 ಸಾವಿರ ಕೋಟಿ ರೂ (ಶೇ 11)
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ- 24 ಸಾವಿರ ಕೋಟಿ ರೂ (ಶೇ 7)
  • ಇಂಧನ- 22 ಸಾವಿರ ಕೋಟಿ ರೂ (ಶೇ 7)
  • ನೀರಾವರಿ-19 ಸಾವಿರ ಕೋಟಿ ರೂ (ಶೇ 6)
  • ಗ್ರಾಮೀಣಾಭಿವೃದ್ಧಿ -18ಸಾವಿರ ಕೋಟಿ ರೂ (ಶೇ 5)
  • ಒಳಾಡಳಿತ ಮತ್ತು ಸಾರಿಗೆ – 16ಸಾವಿರ ಕೋಟಿ (ಶೇ 5)
  • ಕಂದಾಯ- 16 ಸಾವಿರ ಕೋಟಿ (ಶೇ 5)
  • ಆರೋಗ್ಯ ಇಲಾಖೆ- 14 ಸಾವಿರ ಕೋಟಿ ರೂ (ಶೇ 4)
  • ಸಮಾಜ ಕಲ್ಯಾಣ- 11 ಸಾವಿರ ಕೋಟಿ ರೂ (ಶೇ 3)
  • ಲೋಕೋಪಯೋಗಿ ಇಲಾಖೆ- 10ಸಾವಿರ ಕೋಟಿ ರೂ (ಶೇ 3)
  • ಕೃಷಿ ಮತ್ತು ತೋಟಗಾರಿಕೆ 5860 ಕೋಟಿ ರೂ (ಶೇ 2)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ- 3024ಕೋಟಿ ರೂ (ಶೇ 1)
  • ಇತರೆ- 1.09ಲಕ್ಷ ಕೋಟಿ (ಶೇ 32)

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಸ್ವಂತ ತೆರಿಗೆ ವಿವರ

ಒಟ್ಟು ರಾಜಸ್ವ ಸಂಗ್ರಹ- 1.62ಲಕ್ಷ ಕೋಟಿ ರೂ

ವಾಣಿಜ್ಯ ತೆರಿಗೆ- 1ಲಕ್ಷ ಕೋಟಿ ರೂ (ಶೇ 58)

ಅಬಕಾರಿ ತೆರಿಗೆ- 38ಸಾವಿರ ಕೋಟಿ ರೂ (ಶೇ 20)

ನೋಂದಣಿ ಮತ್ತು ಮುದ್ರಾಂಕ 25ಸಾವಿರ ಕೋಟಿ ರೂ (ಶೇ 14)

ಮೋಟಾರು ವಾಹನ 11500 ಕೋಟಿ ರೂ (ಶೇ 7)

ಇತರೆ- 2153 ಕೋಟಿ (ಶೇ 1)

ಇದನ್ನೂ ಓದಿ; ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...