HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...