HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...