HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...