HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...