HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...