HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...