Homeಮುಖಪುಟಹಿಜಾಬ್: ‘ವಿಭಿನ್ನ ತೀರ್ಪು’ ನೀಡಿದ ಸುಪ್ರಿಂಕೋರ್ಟ್‌ ದ್ವಿಸದಸ್ಯ ಪೀಠ

ಹಿಜಾಬ್: ‘ವಿಭಿನ್ನ ತೀರ್ಪು’ ನೀಡಿದ ಸುಪ್ರಿಂಕೋರ್ಟ್‌ ದ್ವಿಸದಸ್ಯ ಪೀಠ

- Advertisement -
- Advertisement -

ರಾಜ್ಯ ಸರ್ಕಾರ ಹೊರಡಿಸಿದ್ದ ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂಕೋರ್ಟ್‌‌ ದ್ವಿಸದಸ್ಯ ಪೀಠವೂ ವಿಭಿನ್ನವಾಗಿ ತೀರ್ಪು ನೀಡಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವುಗಳನ್ನು ಅನುಮತಿಸಿದರು.

“ಇದು ಅಂತಿಮವಾಗಿ ಆಯ್ಕೆಯ ವಿಷಯವೇ ಹೊರತು ಬೇರೇನೂ ಇಲ್ಲ. ನನ್ನ ಮನಸ್ಸಿನಲ್ಲಿ ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣ ಮಾತ್ರವಾಗಿತ್ತು. ನನ್ನ ಸಹೋದರ ನ್ಯಾಯಾಧೀಶರ ತೀರ್ಪನ್ನು ನಾನು ಗೌರವಯುತಗಿಯೆ ಒಪ್ಪುವುದಿಲ್ಲ” ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ. ಇದು ಧಾರ್ಮಿಕ ಹಕ್ಕಿಗಿಂತ ಶಿಕ್ಷಣದ ಹಕ್ಕಿನ ವಿಚಾರ ಮತ್ತು ವಿದ್ಯಾರ್ಥಿನಿಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದ ಅವರು ಕರ್ನಾಟಕ ಸರ್ಕಾರದ ಆದೇಶವನ್ನು ರದ್ದು ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಭಿಪ್ರಾಯದಲ್ಲಿ ಭಿನ್ನಾಭಿಪ್ರಾಯವಿದೆ” ಎಂದು ನ್ಯಾಯಮೂರ್ತಿ ಹೇಮಂತ್‌ ಗುಪ್ತಾ ಅವರು ಹೇಳಿದ್ದಾರೆ. ಅರ್ಜಿದಾರರಿಗೆ 11 ಪ್ರಶ್ನೆಗಳನ್ನು ಕೇಳಿದ ನ್ಯಾಯಮೂರ್ತಿ ವಿದ್ಯಾರ್ಥಿನಿಯರ ಮನವಿಯನ್ನು ವಜಾಗೊಳಿಸಿ, ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಒಪ್ಪುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ: ಸುಪ್ರೀಂನಲ್ಲಿ ದುಶ್ಯಂತ್ ದವೆ ವಾದ

ತೀರ್ಪಿನಲ್ಲಿ ಒಮ್ಮತವಿಲ್ಲದಿರುವುದರಿಂದ ಪ್ರಕರಣವು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್‌ ಅವರಿಗೆ ಉಲ್ಲೇಖಿಸಲಾಗಿದೆ. ಅರ್ಜಿಗಳನ್ನು ತ್ರಿಸದಸ್ಯ ಪೀಠದ ವಿಚಾರಣೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ವಿಷಯವನ್ನು ಇರಿಸಲಾಗುವುದು ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು 10 ದಿನಗಳ ಕಾಲ ವಾದಗಳನ್ನು ಆಲಿಸಿ, ಸೆಪ್ಟೆಂಬರ್ 22 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಪೀಠದ ನೇತೃತ್ವದ ನ್ಯಾಯಮೂರ್ತಿ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿದ್ದಾರೆ.

ವಿಚಾರಣೆಯ ಸಮಯದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ ಅರ್ಜಿದಾರರ ಪರ ಹಾಜರಾದ ವಕೀಲರು, ಮುಸ್ಲಿಂ ಹುಡುಗಿಯರು ತರಗತಿಗೆ ಹಿಜಾಬ್ ಧರಿಸಿ ಆಗಮಿಸುವುದನ್ನು ತಡೆಯುವುದರಿಂದ ಅವರ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಇದರಿಂದಾಗಿ ಅವರು ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸುವ ರಾಜ್ಯ ಸರ್ಕಾರ ಹೊರಡಿಸಿದ್ದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ವಕೀಲರು ಗಮನಸೆಳೆದಿದ್ದರು. ಹಿಜಾಬನ್ನು ಹಿಂದೂಗಳು ಧರಿಸಿರುವ ಘೂಂಗಾಟ್ ಅಥವಾ ಬಿಂದಿಗೆ ಮತ್ತು ಸಿಖ್ಖರ ಟರ್ಬನ್‌ಗಳಿಗೆ ಹೋಲಿಸಿದ್ದರು.

ಕೆಲವು ವಕೀಲರು ಈ ವಿಷಯವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೂಡಾ ವಾದಿಸಿದ್ದರು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ವಕೀಲರು, ವಿವಾದ ಹುಟ್ಟುಹಾಕಿರುವ ಸರ್ಕಾರದ ಆದೇಶ ಧರ್ಮ ತಟಸ್ಥವಾಗಿದೆ ಎಂದು ಪ್ರತಿಪಾದಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಆಂದೋಲನವು ‘ಸ್ವಾಭಾವಿಕ’ ಅಲ್ಲ ಎಂದು ಹೇಳಿದ್ದರು.

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ಗುಂಪು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಮಾರ್ಚ್ 15 ರಂದು ಹೈಕೋರ್ಟ್ ವಜಾಗೊಳಿಸಿತ್ತು. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಫೆಬ್ರವರಿ 5, 2022 ರಂದು ರಾಜ್ಯ ಸರ್ಕಾರ ಹಿಜಾಬ್ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಮುಸ್ಲಿಂ ಹುಡುಗಿಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...