Homeಕರ್ನಾಟಕಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

- Advertisement -
- Advertisement -

ರಾಜ್ಯ ಹೈಕೋರ್ಟ್ ಮಂಗಳವಾರ ಬೆಳಿಗ್ಗೆ ಹಿಜಾಬ್ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ ಕೆಲವು ಭಾಗಗಳಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಜೊತೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ 21 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ಸಭೆಗಳು, ಪ್ರತಿಭಟನೆಗಳು ಮತ್ತು ಆಚರಣೆಗಳನ್ನು ನಿಷೇಧಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಸೋಮವಾರ ಸಂಜೆ ಹೈಕೋರ್ಟ್ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೆಬ್ರವರಿ 25 ರಂದು, ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೈಬುನ್ನಿಸಾ ಮೊಹಿದೀನ್ ಖಾಝಿ ಅವರ ಪೂರ್ಣ ಪೀಠವು ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಮುಸ್ಲಿಂ ಹುಡುಗಿಯರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿ ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ಪ್ರತಿಪಾದಿಸಿ, ಫೆಬ್ರವರಿ ಐದರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದು ಮಾಡಬೇಕು ಎಂದು ನ್ಯಾಯಾಲಯವನ್ನು ವಿನಂತಿಸಿದ್ದರು. ಇದನ್ನು ವಿರೋಧಿಸಿ ಸರ್ಕಾರದ ಪರವಾಗಿ ವಾದಿಸಿದ್ದ ಅಡ್ವೊಕೇಟ್ ಜನರಲ್ ಅವರು, ಸರ್ಕಾರದ ಆದೇಶವು ನಿರುಪದ್ರವವಾಗಿದ್ದು ಮತ್ತು ಧಾರ್ಮಿಕ ವೇಷಭೂಷಣವನ್ನು ನಿಷೇಧಿಸಲು ನಿರ್ದೇಶಿಸಿಲ್ಲ. ಸಮವಸ್ತ್ರಗಳನ್ನು ಸೂಚಿಸುವ ಅಧಿಕಾರವನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದೇವೆ ಎಂದು ಹೇಳಿದ್ದರು.

ಆದಾಗ್ಯೂ, ಸರ್ಕಾರಿ ಆದೇಶದ ಕೆಲವು ಭಾಗಗಳು ಅನಗತ್ಯವಾಗಿತ್ತು ಎಂದು ಅಡ್ವೊಕೇ‌ಟ್‌ ಜನರಲ್‌ ಒಪ್ಪಿಕೊಂಡಿದ್ದಾರೆ. ಜೊತೆಗೆ, ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೇಳಿದೆ.

ಆರಂಭದಲ್ಲಿ ಏಕ ನ್ಯಾಯಾಪೀಠ ಅರ್ಜಿಗಳ ವಿಚಾರಣೆ ನಡೆಸಿತ್ತು. ನಂತರ ನ್ಯಾಯಮೂರ್ತಿ ದೀಕ್ಷಿತ್ ಅವರು ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದರು.

ಇಂದು ಹೈಕೋರ್ಟ್ ಆದೇಶ ನೀಡಿದರೂ ಪ್ರಕರಣವು ಸುಪ್ರೀಂಕೋರ್ಟ್‌ಗೆ ಹೋಗುವ ನಿರೀಕ್ಷೆಯಿದೆ. ಫೆಬ್ರವರಿ 11 ರಂದು, ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧದ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಜೊತೆಗೆ ವಿವಾದವನ್ನು ದೊಡ್ಡ ಮಟ್ಟದಲ್ಲಿ ಹರಡದಂತೆ ಅರ್ಜಿದಾರರನ್ನು ಕೇಳಿಕೊಂಡಿತ್ತು.

“ಪ್ರಕರಣದ ಬಗ್ಗೆ ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ…ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ. ಹೀಗಾಗಿ ಪ್ರಕರಣವನ್ನು ದೆಹಲಿಗೆ ತರುವುದು ಸರಿಯೇ. ರಾಷ್ಟ್ರೀಯ ಮಟ್ಟದ ಸಮಸ್ಯೆಗಳು ಮತ್ತು ಎಲ್ಲವುಗಳ ಬಗ್ಗೆಯೂ ನೀವು ಯೋಚಿಸಬೇಕು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಅವರು ಉಡುಪಿಯ ವಿದ್ಯಾರ್ಥಿಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ದೇವದತ್ತ್ ಕಾಮತ್‌ಗೆ ತಿಳಿಸಿದ್ದರು.

ಈ ವೇಳೆ ಕಾಮತ್ ಅವರು ನ್ಯಾಯಾಲಯವು ಪರಿಶೀಲಿಸಬೇಕಾದ ಕಾನೂನು ಸಮಸ್ಯೆಗಳನ್ನು ಒಳಗೊಂಡಿರುವುದರಿಂದ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು, “ಖಂಡಿತವಾಗಿಯೂ, ನಾವು ಪರಿಶೀಲಿಸುತ್ತೇವೆ. ತಪ್ಪಿದ್ದರೆ ಖಂಡಿತ ರಕ್ಷಿಸುತ್ತೇವೆ. ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ನಾವು ರಕ್ಷಿಸಬೇಕಾಗಿದೆ…ನೋಡೋಣ. ಸೂಕ್ತ ಸಮಯದಲ್ಲಿ, ಖಂಡಿತವಾಗಿಯೂ ನಾವು ಹಸ್ತಕ್ಷೇಪ ಮಾಡುತ್ತೇವೆ. ಯಾವಾಗ ಬೇಕೋ ಆಗ ನೋಡೋಣ” ಎಂದು ಹೇಳಿದ್ದರು.

ರಾಜ್ಯದ ಶಾಲೆಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳು ಮಾರ್ಚ್ 28 ರಂದು ಪ್ರಾರಂಭವಾಗಲಿದ್ದು, ಪದವಿ ಪೂರ್ವ ಪರೀಕ್ಷೆಗಳು ಎಪ್ರಿಲ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣ: ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...