Homeಕರ್ನಾಟಕಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣ: ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣ: ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು

- Advertisement -
- Advertisement -

ವಿಶ್ವದಾದ್ಯಂತ ಭಾರಿ ಗಮನಸೆಳೆದ ‘ಕಾಲೇಜಿನಲ್ಲಿ ಹಿಬಾಬ್ ನಿಷೇಧ’ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ ತನ್ನ ತೀರ್ಪು ಪ್ರಕಟಿಸಲಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ತಲೆಗೆ ಹಿಜಾಬ್‌ ಧರಿಸುವುದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಲಯಲ್ಲಿ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್ ಬಳಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ವಾದಿಸಿದ್ದರು. ಹಿಜಾಬ್ ಅನ್ನು ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ದೃಷ್ಟಿಯಿಂದ ಅದನ್ನು ನಿಷೇಧಿಸಲು ಕಾಲೇಜು ಅಭಿವೃದ್ಧಿ ಸಂಸ್ಥೆಗೆ ಯಾವುದೆ ಅಧಿಕಾರ ಇಲ್ಲ ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು

ಮುಸ್ಲಿಂ ವಿದ್ಯಾರ್ಥಿನಿರಿಗೆ ಹಿಜಾಬ್ ಧರಿಸಬೇಡಿ ಎಂದು ಉಡುಪಿ ಕಾಲೇಜಿನ ಪ್ರಾಂಶುಪಾಲರು ಹೇಳಿದ್ದರು. ಆದರೆ ವಿದ್ಯಾರ್ಥಿನಿಯರು ಇದನ್ನು ಒಪ್ಪದೆ ಪ್ರತಿಭಟನೆ ನಡೆಸಿದ್ದರು. ಇದರ ನಂತರ ವಿದ್ಯಾರ್ಥಿನಿಯರು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ನಡುವೆ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ಕಾಲೇಜನ್ನು ರಣರಂಗವಾಗಿಸಿದ್ದರು. ಇದಕ್ಕೆ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ, ಎಬಿವಿಪಿ ಮತ್ತು ವಿಎಚ್‌ಪಿ ಕುಮ್ಮಕ್ಕು ಕೂಡಾ ನೀಡಿತ್ತು. ಜೊತೆಗೆ ಅವರು ಕಾಲೇಜಿನ ವಠಾರದಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚುತ್ತಿರುವ ವಿಡಿಯೊಗಳು ಕೂಡಾ ವೈರಲ್ ಆಗಿದ್ದವು.

ಈ ನಡುವೆ ದಲಿತ ವಿದ್ಯಾರ್ಥಿಗಳು ಹಿಜಾಬ್‌ಗೆ ಬೆಂಬಲ ಸೂಚಿಸಲು ನೀಲಿ ಬಣ್ಣದ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.

ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ಏಕಪೀಠದ ನ್ಯಾಯಾಧೀಶರು, ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಈ ಮಧ್ಯೆ ಮಧ್ಯಂತರ ಆದೇಶ ನೀಡಿದ್ದ ನ್ಯಾಯಾಲಯ ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸಿ ಬರದಂತೆ ತೀರ್ಪು ನೀಡಿದ್ದರು.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...