Homeಅಂತರಾಷ್ಟ್ರೀಯ"ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ": ಯುಎಸ್ ಸಂಸ್ಥೆ ಟೀಕೆ

“ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಯುಎಸ್ ಸಂಸ್ಥೆ ಟೀಕೆ

ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಯಿಸಿದ್ದು, ಪ್ರೇರಿತ ಪ್ರತಿಕ್ರಿಯೆಗಳ ಸ್ವಾಗತಾರ್ಹವಲ್ಲ ಎಂದಿದೆ.

- Advertisement -
- Advertisement -

ಶಾಲಾ-ಕಾಲೇಜುಗಲಲ್ಲಿ ಹಿಜಾಬ್ ಧರಿಸಬೇಕೆಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ಕರ್ನಾಟಕದಲ್ಲಿ ನಿರಾಕರಿಸುತ್ತಿರುವುದನ್ನು ವಿದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಗಾ ವಹಿಸುವ ಮತ್ತು ವರದಿ ಮಾಡುವ ಯುಎಸ್ ಸರ್ಕಾರಿ ಸಂಸ್ಥೆಯು ಟೀಕಿಸಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (International Religious Freedom)ನ ರಾಯಬಾರಿ ರಶಾದ್ ಹುಸೇನ್, “ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ವ್ಯಕ್ತಿಗಳು ತಮ್ಮ ಇಷ್ಟದ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರಾಕರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಹಾಗು ಮಹಿಳೆಯರು ಮತ್ತು  ಹುಡುಗಿಯರನ್ನು ಕಳಂಕಗೊಳಿಸುತ್ತದೆ ಮತ್ತು ಕಡೆಗಣಿಸುತ್ತದೆ” ಎಂದು ಹುಸೇನ್ ಅವರ ಕಚೇರಿ ಟ್ವೀಟ್ ಮಾಡಿದೆ.

ಹುಸೇನ್ ಅವರು ರಾಯಭಾರಿಯಾಗಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಮುನ್ನಡೆಸುವ ಸಚಿವಾಲಯವು ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ ಯುಎಸ್ ಕಚೇರಿ ಅಡಿಯಲ್ಲಿ ಬರುತ್ತದೆ, ಇದು ಹಿಂದೆ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಸಂದರ್ಭದಲ್ಲಿಯೂ ಸಹ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಧಿಕೃತ ವಕ್ತಾರ ಶ್ರೀ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ “ಕರ್ನಾಟಕ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಷಯವು ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಿಂದ ನ್ಯಾಯಾಂಗ ವಿಚಾರಣೆಯಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿ ಮತ್ತು ರಾಜಕೀಯದಲ್ಲಿನ ಸಮಸ್ಯೆಗಳನ್ನು ಪರಿಗಣಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಈ ವಾಸ್ತವಗಳ ಕುರಿತು ಸರಿಯಾದ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಪ್ರತಿಕ್ರಿಯೆಗು ಸ್ವಾಗತಾರ್ಹವಲ್ಲ” ಎಂದಿದ್ದಾರೆ.

ಹುಸೇನ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ US ಸೆನೆಟ್‌ನಿಂದ IRF ಗೆ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು IRF ಗೆ ಮೊದಲ ಮುಸ್ಲಿಂ ರಾಯಭಾರಿಯಾಗಿದ್ದಾರೆ. ಅವರು ಈ ಹಿಂದೆ ಒಬಾಮಾ ಆಡಳಿತದ ಅವಧಿಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಗೆ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿದ್ದರು.

ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳ ಒಳಗೆ ಶಾಲು ಅಥವಾ ಹಿಜಾಬ್ ಯಾವುದೇ ಧಾರ್ಮಿಕ ಉಡುಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...