Homeಅಂತರಾಷ್ಟ್ರೀಯ"ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ": ಯುಎಸ್ ಸಂಸ್ಥೆ ಟೀಕೆ

“ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಯುಎಸ್ ಸಂಸ್ಥೆ ಟೀಕೆ

ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಯಿಸಿದ್ದು, ಪ್ರೇರಿತ ಪ್ರತಿಕ್ರಿಯೆಗಳ ಸ್ವಾಗತಾರ್ಹವಲ್ಲ ಎಂದಿದೆ.

- Advertisement -
- Advertisement -

ಶಾಲಾ-ಕಾಲೇಜುಗಲಲ್ಲಿ ಹಿಜಾಬ್ ಧರಿಸಬೇಕೆಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ಕರ್ನಾಟಕದಲ್ಲಿ ನಿರಾಕರಿಸುತ್ತಿರುವುದನ್ನು ವಿದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಗಾ ವಹಿಸುವ ಮತ್ತು ವರದಿ ಮಾಡುವ ಯುಎಸ್ ಸರ್ಕಾರಿ ಸಂಸ್ಥೆಯು ಟೀಕಿಸಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (International Religious Freedom)ನ ರಾಯಬಾರಿ ರಶಾದ್ ಹುಸೇನ್, “ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ವ್ಯಕ್ತಿಗಳು ತಮ್ಮ ಇಷ್ಟದ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರಾಕರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಹಾಗು ಮಹಿಳೆಯರು ಮತ್ತು  ಹುಡುಗಿಯರನ್ನು ಕಳಂಕಗೊಳಿಸುತ್ತದೆ ಮತ್ತು ಕಡೆಗಣಿಸುತ್ತದೆ” ಎಂದು ಹುಸೇನ್ ಅವರ ಕಚೇರಿ ಟ್ವೀಟ್ ಮಾಡಿದೆ.

ಹುಸೇನ್ ಅವರು ರಾಯಭಾರಿಯಾಗಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಮುನ್ನಡೆಸುವ ಸಚಿವಾಲಯವು ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ ಯುಎಸ್ ಕಚೇರಿ ಅಡಿಯಲ್ಲಿ ಬರುತ್ತದೆ, ಇದು ಹಿಂದೆ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಸಂದರ್ಭದಲ್ಲಿಯೂ ಸಹ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಧಿಕೃತ ವಕ್ತಾರ ಶ್ರೀ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ “ಕರ್ನಾಟಕ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಷಯವು ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಿಂದ ನ್ಯಾಯಾಂಗ ವಿಚಾರಣೆಯಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿ ಮತ್ತು ರಾಜಕೀಯದಲ್ಲಿನ ಸಮಸ್ಯೆಗಳನ್ನು ಪರಿಗಣಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಈ ವಾಸ್ತವಗಳ ಕುರಿತು ಸರಿಯಾದ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಪ್ರತಿಕ್ರಿಯೆಗು ಸ್ವಾಗತಾರ್ಹವಲ್ಲ” ಎಂದಿದ್ದಾರೆ.

ಹುಸೇನ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ US ಸೆನೆಟ್‌ನಿಂದ IRF ಗೆ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು IRF ಗೆ ಮೊದಲ ಮುಸ್ಲಿಂ ರಾಯಭಾರಿಯಾಗಿದ್ದಾರೆ. ಅವರು ಈ ಹಿಂದೆ ಒಬಾಮಾ ಆಡಳಿತದ ಅವಧಿಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಗೆ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿದ್ದರು.

ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳ ಒಳಗೆ ಶಾಲು ಅಥವಾ ಹಿಜಾಬ್ ಯಾವುದೇ ಧಾರ್ಮಿಕ ಉಡುಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...