Homeಅಂತರಾಷ್ಟ್ರೀಯ"ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ": ಯುಎಸ್ ಸಂಸ್ಥೆ ಟೀಕೆ

“ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಯುಎಸ್ ಸಂಸ್ಥೆ ಟೀಕೆ

ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಯಿಸಿದ್ದು, ಪ್ರೇರಿತ ಪ್ರತಿಕ್ರಿಯೆಗಳ ಸ್ವಾಗತಾರ್ಹವಲ್ಲ ಎಂದಿದೆ.

- Advertisement -
- Advertisement -

ಶಾಲಾ-ಕಾಲೇಜುಗಲಲ್ಲಿ ಹಿಜಾಬ್ ಧರಿಸಬೇಕೆಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ಕರ್ನಾಟಕದಲ್ಲಿ ನಿರಾಕರಿಸುತ್ತಿರುವುದನ್ನು ವಿದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಗಾ ವಹಿಸುವ ಮತ್ತು ವರದಿ ಮಾಡುವ ಯುಎಸ್ ಸರ್ಕಾರಿ ಸಂಸ್ಥೆಯು ಟೀಕಿಸಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (International Religious Freedom)ನ ರಾಯಬಾರಿ ರಶಾದ್ ಹುಸೇನ್, “ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ವ್ಯಕ್ತಿಗಳು ತಮ್ಮ ಇಷ್ಟದ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರಾಕರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಹಾಗು ಮಹಿಳೆಯರು ಮತ್ತು  ಹುಡುಗಿಯರನ್ನು ಕಳಂಕಗೊಳಿಸುತ್ತದೆ ಮತ್ತು ಕಡೆಗಣಿಸುತ್ತದೆ” ಎಂದು ಹುಸೇನ್ ಅವರ ಕಚೇರಿ ಟ್ವೀಟ್ ಮಾಡಿದೆ.

ಹುಸೇನ್ ಅವರು ರಾಯಭಾರಿಯಾಗಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಮುನ್ನಡೆಸುವ ಸಚಿವಾಲಯವು ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ ಯುಎಸ್ ಕಚೇರಿ ಅಡಿಯಲ್ಲಿ ಬರುತ್ತದೆ, ಇದು ಹಿಂದೆ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಸಂದರ್ಭದಲ್ಲಿಯೂ ಸಹ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಧಿಕೃತ ವಕ್ತಾರ ಶ್ರೀ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ “ಕರ್ನಾಟಕ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಷಯವು ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಿಂದ ನ್ಯಾಯಾಂಗ ವಿಚಾರಣೆಯಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿ ಮತ್ತು ರಾಜಕೀಯದಲ್ಲಿನ ಸಮಸ್ಯೆಗಳನ್ನು ಪರಿಗಣಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಈ ವಾಸ್ತವಗಳ ಕುರಿತು ಸರಿಯಾದ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಪ್ರತಿಕ್ರಿಯೆಗು ಸ್ವಾಗತಾರ್ಹವಲ್ಲ” ಎಂದಿದ್ದಾರೆ.

ಹುಸೇನ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ US ಸೆನೆಟ್‌ನಿಂದ IRF ಗೆ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು IRF ಗೆ ಮೊದಲ ಮುಸ್ಲಿಂ ರಾಯಭಾರಿಯಾಗಿದ್ದಾರೆ. ಅವರು ಈ ಹಿಂದೆ ಒಬಾಮಾ ಆಡಳಿತದ ಅವಧಿಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಗೆ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿದ್ದರು.

ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳ ಒಳಗೆ ಶಾಲು ಅಥವಾ ಹಿಜಾಬ್ ಯಾವುದೇ ಧಾರ್ಮಿಕ ಉಡುಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...