Homeಮುಖಪುಟಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ 'ಸೈಬರ್ ಭಯೋತ್ಪಾದನೆ' ಪ್ರಕರಣ ದಾಖಲಿಸಿ ಜೈಲಿಗಟ್ಟಿದ...

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

- Advertisement -
- Advertisement -

ಯೂಟ್ಯೂಬ್‌ನಲ್ಲಿ ‘ಹಿಜಾಬ್ ಚಾಲೆಂಜ್’ ವಿಡಿಯೋ ಅಪ್ಲೋಡ್ ಮಾಡಿದ್ದ ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು, ಆತನನ್ನು ಜೈಲಿಗಟ್ಟಿದ ಘಟನೆ ನಡೆದಿದೆ.

ಅನಶ್ ಅಹ್ಮದ್ (21) ಬಂಧನಕ್ಕೊಳಗಾದ ಯುವಕ. ಕೊಯಮತ್ತೂರಿನ ಪೊಧನೂರು ನಿವಾಸಿಯಾಗಿರುವ ಅನಶ್, ಫ್ರೀಲ್ಯಾನ್ಸ್ ವಿಡಿಯೋ ಜಾಕಿಯಾಗಿದ್ದಾನೆ. ಸೆಪ್ಟೆಂಬರ್ 5ರಂದು ಅನಶ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದ ಕಾರಣ ಕೊಯಮತ್ತೂರು ಜೈಲು ಪಾಲಾಗಿದ್ದ ಅನಶ್, ಸುಮಾರು 56 ದಿನಗಳ ಬಳಿಕ ಅಕ್ಟೋಬರ್ 30ರಂದು ಬಿಡುಗಡೆಯಾಗಿದ್ದಾನೆ.

“ಯೂಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಕ್ಕೆ ಅನಶ್ ಜೈಲು ಸೇರಿರುವುದು, ಪ್ರಸ್ತುತ ಭಾರತ ಮತ್ತು ಕರ್ನಾಟಕದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಾಸ್ತವ ಪರಿಸ್ಥಿತಿಯನ್ನು ಬಿಂಬಿಸುತ್ತದೆ” ಎಂದು ಅನಶ್ ಪರ ವಕೀಲ ಪುಲಿಯಾಂತೋಪ್ ಮೋಹನ್ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ : ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಕಸ್ವಾ ಟಿವಿ’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅನಶ್ ಹಿಜಾಬ್ ಚಾಲೆಂಜ್ ವಿಡಿಯೋ ಅಪ್ಲೋಡ್ ಮಾಡಿದ್ದ. ಪ್ರಸ್ತುತ ತೆಗೆದು ಹಾಕಲಾಗಿರುವ ಆ ವಿಡಿಯೋದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತು, ಅಲ್ಲಿ ಓಡಾಡುವ ಮಹಿಳೆಯರಿಗೆ ಹಿಜಾಬ್ ಧರಿಸಿ ನೋಡುತ್ತೀರಾ? ಎಂದು ಕೇಳುವ ದೃಶ್ಯವಿತ್ತು. ಆ ವಿಡಿಯೋವನ್ನು ಕೊಯಮತ್ತೂರಿನ ರೇಸ್‌ ಕೋರ್ಸ್‌ ಬಳಿ ರೆಕಾರ್ಡ್ ಮಾಡಲಾಗಿತ್ತು ಎಂದು ವರದಿಗಳು ಹೇಳಿವೆ.

ವಿದೇಶಗಳಲ್ಲಿ ನಡೆಯುತ್ತಿದ್ದ ಹಿಜಾಬ್ ಚಾಲೆಂಜ್ ಈಗ ಭಾರತಕ್ಕೂ ಕಾಲಿಟ್ಟಿದೆ. ಪ್ರವಾಸಿ ತಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲುವ ಮುಸ್ಲಿಂ ಯುವತಿಯರು, ಅಲ್ಲಿ ಓಡಾಡುವ ಮಹಿಳೆಯರಿಗೆ ಹಿಜಾಬ್ ಧರಿಸಿ ಹೇಗೆ ಕಾಣುತ್ತೀರಿ ಎಂದು ನೋಡುತ್ತೀರಾ? ಎಂದು ಕೇಳುತ್ತಾರೆ. ಆಗ, ಧರ್ಮಾತೀತವಾಗಿ ಇಷ್ಟ ಇರುವ ಮಹಿಳೆಯರು ಒಂದು ಸಲ ಹಿಜಾಬ್ ಧರಿಸಿ ತಮ್ಮನ್ನು ತಾವು ಹೇಗೆ ಕಾಣುತ್ತಾರೆ ಎಂದು ಕನ್ನಡಿ ಹಿಡಿದು ನೋಡುತ್ತಾರೆ. ಬಳಿಕ, ಹಿಜಾಬ್ ಕಳಚಿ ವಾಪಸ್ ಕೊಟ್ಟು ತೆರಳುತ್ತಾರೆ. ಇಲ್ಲಿ ಯಾರಿಗೂ ಹಿಜಾಬ್ ಧರಿಸಿಲು ಬಲವಂತ ಮಾಡುವುದಿಲ್ಲ, ಮನವಿ ಮಾಡಲಾಗುತ್ತದೆ. ಜನರು ಇಷ್ಟವಿದ್ದರೆ ಧರಿಸಬಹುದು. ಈ ಮೂಲಕ ಮುಸ್ಲಿಂ ಮಹಿಳೆಯರ ಉಡುಪಾದ ಹಿಜಾಬ್ ಅನ್ನು ಇತರ ಧರ್ಮೀಯರಿಗೆ ಪರಿಚಯಿಸಲಾಗುತ್ತದೆ.

ಈ ಪ್ರಕರಣದಲ್ಲಿ ಕೊಯಮತ್ತೂರು ರೇಸ್‌ ಕೋರ್ಸ್ ಬಳಿ ಹಿಜಾಬ್ ಚಾಲೆಂಜ್ ನಡೆಸಿದ್ದ ವಿಡಿಯೋವನ್ನು ಕಸ್ವಾ ಟಿವಿ ಯೂಟ್ಯೂಬ್ ಚಾನೆಲ್‌ನಲ್ಲಿ ಅನಶ್ ಹಂಚಿಕೊಂಡಿದ್ದ. ಇದು ಬಲಪಂಥೀಯ ಗುಂಪಿನ ಕೆಂಗಣ್ಣಿಗೆ ಗುರಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿತ್ತು. ಮುಂದುವರಿದು, ಬಲಪಂಥೀಯ ಸಂಘಟನೆ ಭಾರತ್ ಸೇನೆಯ ಜಿಲ್ಲಾ ಸಂಯೋಜಕ ಎಸ್‌. ಕುಮರೇಶನ್ ಎಂಬವರು ವಿಡಿಯೋ ಧರ್ಮಗಳ ನಡುವೆ ಉದ್ವಿಗ್ನತೆ ಉಂಟು ಮಾಡುತ್ತದೆ ಎಂದು ಆರೋಪಿಸಿ, ಅನಶ್ ವಿರುದ್ದ ದೂರು ದಾಖಲಿಸಿದ್ದರು.

ದೂರು ಆಧರಿಸಿ ಅನಶ್ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 352 ಮತ್ತು 353(2) ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆಗೆ ಶಿಕ್ಷೆ) ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನಶ್‌ನ ಬಂಧಿಸಿದ್ದರು. ಬಳಿಕ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಅನಶ್ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿಗಳನ್ನು ಕೊಯಮತ್ತೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಆತ ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿ ಜಾಮೀನು ಪಡೆದಿದ್ದಾನೆ.

ಅನಶ್ ಜಾಮೀನು ಅರ್ಜಿಯ ವಿಚಾರಣೆಯ ವೇಳೆ ಆತನ ಪರ ವಾದ ಮಂಡಿಸಿದ ವಕೀಲ ಮೋಹನ್ ಅವರು, “ಯಾರನ್ನೂ ಹಿಜಾಬ್ ಧರಿಸುವಂತೆ ಒತ್ತಾಯಿಸಿಲ್ಲ. ಜನರು ಸ್ವಯಂ ಪ್ರೇರಿತರಾಗಿ ಧರಿಸಿದ್ದಾರೆ. ಇದರಲ್ಲಿ ಯಾವುದೇ ಸಮುದಾಯಗಳ ನಡುವೆ ವಿವಾದ ಸೃಷ್ಟಿಸುವ ಉದ್ದೇಶವಿರಲಿಲ್ಲ. ಅಲ್ಲದೆ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಯಾರೂ ಕೂಡ ದೂರು ದಾಖಲಿಸಿಲ್ಲ ಎಂದಿದ್ದಾರೆ. ನ್ಯಾಯಮೂರ್ತಿ ಪಿ ಧನಬಾಲ್ ಅವರು ಅನಶ್ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಪರಿಗಣಿಸಿ ಮತ್ತು ಆತನ ಜೈಲುವಾಸ ಅನುಭವಿಸಿದ ಅವಧಿಯನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲ ಮೋಹನ್ ಅವರು, “ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಅನಶ್ ವಿರುದ್ದ ಐಟಿ ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆ) ಪ್ರಕರಣ ಹೂಡಿರುವುದು ‘ನ್ಯಾಯಸಮ್ಮತವಲ್ಲ’. ಏಕೆಂದರೆ, ವಿಡಿಯೋ ಅಪ್ಲೋಡ್ ಮಾಡಿರುವುದರ ಹಿಂದೆ ಯಾವುದೇ ಅಪರಾಧ ಎಸಗುವ ಉದ್ದೇಶ ಇರಲಿಲ್ಲ. ಸೈಬರ್ ಭಯೋತ್ಪಾದನೆ ಎಂದರೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕುವ ಚಟುವಟಿಕೆಗಳಿಂದ ಕೂಡಿರಬೇಕು. ಇದೊಂದು ಸಾಮಾನ್ಯ ಸೈಬರ್ ಪ್ರಕರಣ. ವಿಡಿಯೋ ಸ್ಪಷ್ಟವಾಗಿ ಭಾರತೀಯ ಸಂವಿಧಾನದ 25 ನೇ ಪರಿಚ್ಛೇದದ ಅಡಿಯಲ್ಲಿ ಬರುತ್ತದೆ. 25ನೇ ಪರಿಚ್ಛೇದ ನಮಗೆ ನಮ್ಮ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

“ಸೆಕ್ಷನ್ 66 ಎಫ್ ಸೈಬರ್ ಭಯೋತ್ಪಾದನೆಯ ಶಿಕ್ಷೆಗೆ ಸಂಬಂಧಿಸಿದೆ. ಭಾರತದ ಸಾರ್ವಭೌಮತೆ, ಸಮಗ್ರತೆ, ಭದ್ರತೆ ಅಥವಾ ಸ್ನೇಹ ಸಂಬಂಧಗಳಿಗೆ ಬೆದರಿಕೆಯೊಡ್ಡುವ ಕೃತ್ಯಗಳನ್ನು ಈ ಸೆಕ್ಷನ್ ಅಪರಾಧ ಎಂದು ಪರಿಗಣಿಸುತ್ತದೆ. ವಿಶೇಷವಾಗಿ ಆ ಕೃತ್ಯಗಳು ಕಂಪ್ಯೂಟರ್‌ಗಳು ಅಥವಾ ಇತರ ಡಿಜಿಟಲ್ ಸಾಧನಗಳ ಬಳಕೆಯನ್ನು ಒಳಗೊಂಡಿರಬೇಕು. ಈ ಪ್ರಕರಣದಲ್ಲಿ ಅನಶ್ ಅಪ್ಲೋಡ್ ಮಾಡಿರುವ ವಿಡಿಯೋಗೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ನಡೆದ ಪರ-ವಿರೋಧ ಚರ್ಚೆಯನ್ನು ಆಧರಿಸಿ ಪೊಲೀಸರು ಸೆಕ್ಷನ್ 66 ಎಫ್ ಅನ್ವಯಿಸಿದ್ದಾರೆ. ಇದರಲ್ಲಿ ಪೊಲೀಸರ ದುರದ್ದೇಶ ಎದ್ದು ಕಾಣುತ್ತದೆ. ಅನಶ್ ಅಪ್ಲೋಡ್ ಮಾಡಿರುವ ವಿಡಿಯೋದಿಂದ ನಮಗೆ ಸಮಸ್ಯೆಯಾಗಿದೆ ಎಂದು ಯಾರೂ ಕೂಡ ದೂರು ನೀಡಿಲ್ಲ ಮತ್ತು ವಿಡಿಯೋ ಇತ್ಯಾದಿಗಳ ಮೂಲಕ ಹೇಳಿಕೊಂಡಿಲ್ಲ. ಅನಶ್ ವಿಡಿಯೋ ಅಪ್ಲೋಡ್ ಮಾಡಿದ ಬಳಿಕ ಸಾವರ್ಜನಿಕ ಅಶಾಂತಿ ಸೃಷ್ಟಿಸುವ ಯಾವುದೇ ಪ್ರತಿಭಟನೆಗಳು ನಡೆದಿಲ್ಲ” ಎಂದು ವಕೀಲ ಮೋಹನ್ ವಿವರಿಸಿದ್ದಾರೆ.

ಕೇವಲ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಅನಶ್ ವಿರುದ್ದ ಸೈಬರ್ ಭಯೋತ್ಪಾದನೆ ಪ್ರಕರಣ ಹೂಡಿದ ಪೊಲೀಸರ ಕ್ರಮ ಸರಿಯಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...