Homeಕರ್ನಾಟಕರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ಕಾಲೇಜಿನ ನಿಯಮ ಪುಸ್ತಕದಲ್ಲಿ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸುವ ಅವಕಾಶವಿದೆ ಎಂಬುದನ್ನು ವಿದ್ಯಾರ್ಥಿನಿಯರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಕರ್ನಾಟಕದ ಕರಾವಳಿಯ ಕಾಲೇಜುಗಳಲ್ಲಿ ಕಾಣಿಸಿಕೊಂಡಿರುವ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಕೋಮುವಿಭಜನೆಯ ಭಾವನೆ ಸೃಷ್ಟಿಯಾಗುವುದಕ್ಕೆ ಕಾರಣವಾಗುತ್ತಿರುವ ಈ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ತಳೆದಿರುವ ನಿಲುವಿಗೆ ತೀವ್ರ ಟೀಕೆ ವ್ಯಕ್ತವಾಗಿದೆ.

ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ತೊಡುವ ವಿಷಯದಲ್ಲಿ ಆರಂಭವಾದ ವಿವಾದ ಈಗ ಇನ್ನಷ್ಟು ಹರಡಿ, ಕುಂದಾಪುರದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ವಿರೋಧಿಸಿ ಹಿಂದೂ ಯುವಕರು ಕೇಸರಿ ಶಾಲು ಧರಿಸಿ ಪ್ರತಿಭಟಿಸಿದ್ದಾರೆ. ಹಿಜಾಬ್ ಧರಿಸದಂತೆ ಆ ಕಾಲೇಜಿನ ಆಡಳಿತ ಮಂಡಳಿಯೂ ವಿದ್ಯಾರ್ಥಿನಿಯರಿಗೆ ಹೇಳಿದ್ದಾರೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದು ಸಾಧ್ಯವಿಲ್ಲದ ಸ್ಥಿತಿ ಎದುರಿಸುತ್ತಿದ್ದಾರೆ. ಅದಾದ ಮೇಲೆ ಕುಂದಾಪುರದ ಬಂಡಾರ್ಕರ್ ಕಾಲೇಜು, ಶಿವಮೊಗ್ಗದ ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಸರ್ಕಾರಿ ಕಾಲೇಜಿಗೂ ಈ ಬೆಳವಣಿಗೆ ಹರಡಿದೆ.

ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ನಿಲುವನ್ನು ಪ್ರಶ್ನಿಸಿದಾಗ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, “ಸರ್ಕಾರ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಎಂದು ಹೇಳಿದೆ. ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಅದನ್ನು ಅನುಸರಿಸಬೇಕಾಗುತ್ತದೆ. ಪ್ರಜಾಸತ್ತಾತ್ಮಕ ದೇಶದಲ್ಲಿ ಎಲ್ಲರೂ ನಿಯಮಗಳನ್ನು ಅನುಸರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ಒಂದು ವಿವಾದವಾದಾಗ ಆಡಳಿತ ಮಂಡಳಿ ತಕ್ಷಣವೇ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ರಘುಪತಿ ಭಟ್‌ರನ್ನು ಕರೆಸಿ ಸಭೆ ನಡೆಸಿತ್ತು. ಶಿಕ್ಷಣ ಅಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಮತ್ತು ಸರ್ಕಾರದ ಪ್ರತಿನಿಧಿಗಳು ಸಮಸ್ಯೆಗೆ ಸಂಬಂಧಿಸಿದವರ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ವಿವಾದ ತೀವ್ರಸ್ವರೂಪ ಪಡೆಯುತ್ತಾ ಹೋದಂತೆ ನಾಡಿನ ರಾಜಕೀಯ ನಾಯಕರು ಸ್ಪಂದಿಸಲು ಆರಂಭಿಸಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ”ಶಾಲೆ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರದ ವಿಷಯದಲ್ಲಿ ಗೊಂದಲಗಳು ಉಂಟಾಗಬಾರದು. ಉಡುಪಿಯ ಕಾಲೇಜುಗಳಲ್ಲಿ ಆಗಿರುವುದು ರಾಜ್ಯಾದ್ಯಂತ ವಿಸ್ತರಿಸಿದರೆ ಬಹಳಷ್ಟು ದೊಡ್ಡ ಸಮಸ್ಯೆಗಳಾಗುತ್ತವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರಾವಳಿಯ ಇತರ ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ಕೋಮುವಾದಿ ನೆಲೆಯಲ್ಲಿ ವಿಭಜನೆಯಾಗುವ ಸಾಧ್ಯತೆಯ ಆತಂಕ ಸೃಷ್ಟಿಯಾಗಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹಸಚಿವ ಅರಗ ಜ್ಞಾನೇಂದ್ರ, “ಶೈಕ್ಷಣಿಕ ಸಂಸ್ಥೆಗಳು ರಾಜಕೀಯೇತರವಾಗಿ ಧಾರ್ಮಿಕವಾಗಿ ತಟಸ್ಥವಾಗಿರಬೇಕು. ಶಾಲೆಗಳ ನಿಯಮಗಳನ್ನು ಪಾಲಿಸುವಂತೆ ಹೆತ್ತವರನ್ನು ಕೋರಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಹಿಜಾಬ್ ವಿವಾದದ ಹಿಂದಿನ ಕೋಮುವಾದಿ ಶಕ್ತಿಗಳ ಪತ್ತೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಆದರೆ ಅಂತಹ ತನಿಖೆಗೆ ತಂಡ ರಚನೆಯಾಗಿರುವ ಬಗ್ಗೆ ಮಾಹಿತಿಯಿಲ್ಲ. ಪ್ರಸ್ತುತ ಶಿಕ್ಷಣ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಅದು ತನ್ನ ವರದಿಯನ್ನು ಈ ಶೈಕ್ಷಣಿಕ ಅವಧಿಯ ಅಂತ್ಯದೊಳಗೆ ಸಲ್ಲಿಸಲಿದೆ ಮತ್ತು ಅದಕ್ಕೆ ತಕ್ಕಂತೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ಹೀಗಾಗಿ ಈ ಶೈಕ್ಷಣಿಕ ಸಾಲಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಭವಿಷ್ಯವೇನು ಎನ್ನುವುದು ಅಸ್ಪಷ್ಟವಾಗಿದೆ. ಪ್ರೌಢಶಿಕ್ಷಣ ಸಚಿವರೇ ತಿಳಿಸಿರುವಂತೆ, ಪ್ರೌಢ ಶಿಕ್ಷಣ ಮಂಡಳಿ ಅಥವಾ ಸರ್ಕಾರ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸೂಚಿಸುವುದಿಲ್ಲ. ಬದಲಾಗಿ ಶಿಕ್ಷಣ ಕಾಯ್ದೆಯ 11ನೇ ನಿಯಮದ ಪ್ರಕಾರ ಆಯಾ ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ಸೂಚಿಸುವ ಅಧಿಕಾರ ನೀಡಿದೆ. ವಿದ್ಯಾರ್ಥಿಗಳೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿವರಗಳ ಪ್ರಕಾರ ಬಂಡಾರ್ಕರ್ಸ್ ಕಾಲೇಜಿನ ನಿಯಮ ಪುಸ್ತಕದಲ್ಲಿ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸುವ ಅವಕಾಶವಿದೆ. ಆದರೆ ಇದೀಗ ಸರ್ಕಾರದ ಸೂಚನೆ ಮೇರೆಗೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸದಂತೆ ಹೇಳಲಾಗಿದೆ.

 

ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ “ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಸಮುದಾಯವೊಂದನ್ನು ಗುರಿಯಾಗಿಸಲು ಪ್ರಯತ್ನಿಸಿದಾಗ ಅವರು, ಯಾರೇ ಆದರೂ ಕೆಲವು ಪ್ರತ್ಯೇಕ ಪ್ರಕರಣಕ್ಕೆ ಸಂಪೂರ್ಣ ಮುಸ್ಲಿಂ ಸಮುದಾಯವನ್ನು ದೂಷಿಸಿದಲ್ಲಿ ಎರಡನೇ ಆಲೋಚನೆಯಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದರು.

ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದರು ಹಿಜಾಬ್ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಯಾವುದೇ ಸ್ಪಷ್ಟ ನಿಲುವು ತಳೆಯದೆ ಸಮಾಜದ ಸಾಮರಸ್ಯ ಕದಡುವ ಘಟನೆಗೆ ಪರೋಕ್ಷವಾಗಿ ಅವಕಾಶ ನೀಡಿದರೇ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂಬ ಟೀಕೆ ವ್ಯಕ್ತವಾಗಿದೆ.

ಸುಪ್ರಭ ಎನ್‌. ಕೆ


ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...