Homeಕರ್ನಾಟಕಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

ಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ಘರ್ಷಣೆ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ’ಹಿಜಾಬ್ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು‌ ಮಾಡಿರುವುದು ಒಬ್ಬ ಮಂತ್ರಿಯ ಮಗ’ ಎಂದು ಆರೋಪಿಸಿದ್ದಾರೆ.

’ರಾತ್ರೋ ರಾತ್ರಿ ಅಷ್ಟು ಪೇಟ, ಶಾಲುಗಳು ಹೇಗೆ ಬಂದವು..? 50 ಲಕ್ಷ ಶಾಲ್‌ಗಳಿಗೆ ಸೂರತ್‌ನಿಂದ ಆರ್ಡರ್‌ ಮಾಡಿದ್ದಾರೆ. ನಮಗೆ ಎಲ್ಲಾ ಗೊತ್ತಿದೆ. ಹೇಗೆ, ಎಲ್ಲಿಂದ ಬರುತ್ತಿದೆ ಎಂಬ ಮಾಹಿತಿ ನಮಗಿದೆ’ ಎಂದು ಗಮಭೀರ ಆರೋಪ ಮಾಡಿದ್ದಾರೆ.

’ಶಿವಮೊಗ್ಗ ಜಿಲ್ಲೆಯ ಮಂತ್ರಿಯೊಬ್ಬರ ಮಗ ಮೂಟೆಗಟ್ಟಲೆ ಕೇಸರಿ ಶಾಲುಗಳನ್ನು ತರಿಸಿ ಹಂಚುವ ಕೆಲಸ ಮಾಡಿದ್ದಾರೆ. ಕೇಸರಿ ಪೇಟಾಗಳನ್ನು ಹಂಚಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದೀರಾ.. ಅವರ ವಿದ್ಯಾಭ್ಯಾಸ ಹಾಳಾಗುತ್ತಿದೆ. ಚುನಾವಣೆ ಬರುತ್ತಿದೆ ರಾಜಕಾರಣ ಆಗ ಮಾಡೋಣ. ಆದರೆ ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದಿರಿ..?.’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

’ಈಗಲೇ ಈ ಮಕ್ಕಳಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತುವ ಕೆಲಸ ಬೇಡ. ಧರ್ಮ ಯಾವುದಾದರೂ ಭಕ್ತಿ ಒಂದೆ. ದೇವನೊಬ್ಬ ನಾಮ ಹಲವು ಅನ್ನುವುದರಲ್ಲಿ ನಂಬಿಕೆ ಇಟ್ಟಿರುವವರು ನಾವು. ಹುಟ್ಟುವಾಗ ಯಾರು ಇದೇ ಧರ್ಮ, ಜಾತಿ ಬೇಕೆಂದು  ಅರ್ಜಿ ಹಾಕಿರುವುದಿಲ್ಲ’ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಸರ್ಕಾರಿ ಕಾಲೇಜಿನಲ್ಲಿ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರಧ್ವಜ ಹಾರಿಸುವಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ. ಕೇಸರಿ ಬಣ್ಣ ನಮ್ಮ ರಾಷ್ಟ್ರಧ್ವಜದಲ್ಲೇ ಇದೆಯಲ್ಲ ಎಂದಿದ್ದಾರೆ.

ಇತ್ತ, ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ದೀಕ್ಷಿತ್ ’ನ್ಯಾಯಾಂಗ ನಡವಳಿಕೆಯ ಮಾದರಿಯನ್ನು ನೋಡಿದರೆ, ವೈಯಕ್ತಿಕ ಕಾನೂನುಗಳು ಅಥವಾ ಸೆಮಿನಲ್ ಕಾನೂನುಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಪೀಠಗಳನ್ನು ರಚಿಸಲಾಗಿದೆ ಆದ್ದರಿಂದ ಫಲಿತಾಂಶಗಳು ಹೆಚ್ಚು ಸ್ವೀಕಾರಾರ್ಹವಾಗಿರುತ್ತವೆ. ಪೀಠ ರಚನೆಗೆ ತನ್ನದೇ ಆದ ಸಮಯ ತೆಗೆದುಕೊಳ್ಳುತ್ತದೆ ಎಂಬ ಅನಿಸಿಕೆಗೆ ಒಳಗಾಗಬೇಡಿ. ಈ ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.


ಇದನ್ನೂ ಓದಿ: Hijab Live | ಹಿಜಾಬ್‌‌ ಅರ್ಜಿ ವಿಚಾರಣೆ ಲೈವ್‌‌ | ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕು: ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...