Homeಕರ್ನಾಟಕಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

ಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ಘರ್ಷಣೆ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ’ಹಿಜಾಬ್ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು‌ ಮಾಡಿರುವುದು ಒಬ್ಬ ಮಂತ್ರಿಯ ಮಗ’ ಎಂದು ಆರೋಪಿಸಿದ್ದಾರೆ.

’ರಾತ್ರೋ ರಾತ್ರಿ ಅಷ್ಟು ಪೇಟ, ಶಾಲುಗಳು ಹೇಗೆ ಬಂದವು..? 50 ಲಕ್ಷ ಶಾಲ್‌ಗಳಿಗೆ ಸೂರತ್‌ನಿಂದ ಆರ್ಡರ್‌ ಮಾಡಿದ್ದಾರೆ. ನಮಗೆ ಎಲ್ಲಾ ಗೊತ್ತಿದೆ. ಹೇಗೆ, ಎಲ್ಲಿಂದ ಬರುತ್ತಿದೆ ಎಂಬ ಮಾಹಿತಿ ನಮಗಿದೆ’ ಎಂದು ಗಮಭೀರ ಆರೋಪ ಮಾಡಿದ್ದಾರೆ.

’ಶಿವಮೊಗ್ಗ ಜಿಲ್ಲೆಯ ಮಂತ್ರಿಯೊಬ್ಬರ ಮಗ ಮೂಟೆಗಟ್ಟಲೆ ಕೇಸರಿ ಶಾಲುಗಳನ್ನು ತರಿಸಿ ಹಂಚುವ ಕೆಲಸ ಮಾಡಿದ್ದಾರೆ. ಕೇಸರಿ ಪೇಟಾಗಳನ್ನು ಹಂಚಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದೀರಾ.. ಅವರ ವಿದ್ಯಾಭ್ಯಾಸ ಹಾಳಾಗುತ್ತಿದೆ. ಚುನಾವಣೆ ಬರುತ್ತಿದೆ ರಾಜಕಾರಣ ಆಗ ಮಾಡೋಣ. ಆದರೆ ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದಿರಿ..?.’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

’ಈಗಲೇ ಈ ಮಕ್ಕಳಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತುವ ಕೆಲಸ ಬೇಡ. ಧರ್ಮ ಯಾವುದಾದರೂ ಭಕ್ತಿ ಒಂದೆ. ದೇವನೊಬ್ಬ ನಾಮ ಹಲವು ಅನ್ನುವುದರಲ್ಲಿ ನಂಬಿಕೆ ಇಟ್ಟಿರುವವರು ನಾವು. ಹುಟ್ಟುವಾಗ ಯಾರು ಇದೇ ಧರ್ಮ, ಜಾತಿ ಬೇಕೆಂದು  ಅರ್ಜಿ ಹಾಕಿರುವುದಿಲ್ಲ’ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಸರ್ಕಾರಿ ಕಾಲೇಜಿನಲ್ಲಿ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರಧ್ವಜ ಹಾರಿಸುವಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ. ಕೇಸರಿ ಬಣ್ಣ ನಮ್ಮ ರಾಷ್ಟ್ರಧ್ವಜದಲ್ಲೇ ಇದೆಯಲ್ಲ ಎಂದಿದ್ದಾರೆ.

ಇತ್ತ, ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ದೀಕ್ಷಿತ್ ’ನ್ಯಾಯಾಂಗ ನಡವಳಿಕೆಯ ಮಾದರಿಯನ್ನು ನೋಡಿದರೆ, ವೈಯಕ್ತಿಕ ಕಾನೂನುಗಳು ಅಥವಾ ಸೆಮಿನಲ್ ಕಾನೂನುಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಪೀಠಗಳನ್ನು ರಚಿಸಲಾಗಿದೆ ಆದ್ದರಿಂದ ಫಲಿತಾಂಶಗಳು ಹೆಚ್ಚು ಸ್ವೀಕಾರಾರ್ಹವಾಗಿರುತ್ತವೆ. ಪೀಠ ರಚನೆಗೆ ತನ್ನದೇ ಆದ ಸಮಯ ತೆಗೆದುಕೊಳ್ಳುತ್ತದೆ ಎಂಬ ಅನಿಸಿಕೆಗೆ ಒಳಗಾಗಬೇಡಿ. ಈ ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.


ಇದನ್ನೂ ಓದಿ: Hijab Live | ಹಿಜಾಬ್‌‌ ಅರ್ಜಿ ವಿಚಾರಣೆ ಲೈವ್‌‌ | ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕು: ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...