Homeಕರ್ನಾಟಕಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

ಶಿವಮೊಗ್ಗದ ಮಂತ್ರಿಯೊಬ್ಬರ ಮಗ ಕೇಸರಿ ಶಾಲು ಹಂಚಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ಘರ್ಷಣೆ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ’ಹಿಜಾಬ್ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು‌ ಮಾಡಿರುವುದು ಒಬ್ಬ ಮಂತ್ರಿಯ ಮಗ’ ಎಂದು ಆರೋಪಿಸಿದ್ದಾರೆ.

’ರಾತ್ರೋ ರಾತ್ರಿ ಅಷ್ಟು ಪೇಟ, ಶಾಲುಗಳು ಹೇಗೆ ಬಂದವು..? 50 ಲಕ್ಷ ಶಾಲ್‌ಗಳಿಗೆ ಸೂರತ್‌ನಿಂದ ಆರ್ಡರ್‌ ಮಾಡಿದ್ದಾರೆ. ನಮಗೆ ಎಲ್ಲಾ ಗೊತ್ತಿದೆ. ಹೇಗೆ, ಎಲ್ಲಿಂದ ಬರುತ್ತಿದೆ ಎಂಬ ಮಾಹಿತಿ ನಮಗಿದೆ’ ಎಂದು ಗಮಭೀರ ಆರೋಪ ಮಾಡಿದ್ದಾರೆ.

’ಶಿವಮೊಗ್ಗ ಜಿಲ್ಲೆಯ ಮಂತ್ರಿಯೊಬ್ಬರ ಮಗ ಮೂಟೆಗಟ್ಟಲೆ ಕೇಸರಿ ಶಾಲುಗಳನ್ನು ತರಿಸಿ ಹಂಚುವ ಕೆಲಸ ಮಾಡಿದ್ದಾರೆ. ಕೇಸರಿ ಪೇಟಾಗಳನ್ನು ಹಂಚಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದೀರಾ.. ಅವರ ವಿದ್ಯಾಭ್ಯಾಸ ಹಾಳಾಗುತ್ತಿದೆ. ಚುನಾವಣೆ ಬರುತ್ತಿದೆ ರಾಜಕಾರಣ ಆಗ ಮಾಡೋಣ. ಆದರೆ ಮಕ್ಕಳನ್ನು ಯಾಕೆ ಹಾಳು ಮಾಡುತ್ತಿದ್ದಿರಿ..?.’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯಕ್ಕೆ ಛೀಮಾರಿ

’ಈಗಲೇ ಈ ಮಕ್ಕಳಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತುವ ಕೆಲಸ ಬೇಡ. ಧರ್ಮ ಯಾವುದಾದರೂ ಭಕ್ತಿ ಒಂದೆ. ದೇವನೊಬ್ಬ ನಾಮ ಹಲವು ಅನ್ನುವುದರಲ್ಲಿ ನಂಬಿಕೆ ಇಟ್ಟಿರುವವರು ನಾವು. ಹುಟ್ಟುವಾಗ ಯಾರು ಇದೇ ಧರ್ಮ, ಜಾತಿ ಬೇಕೆಂದು  ಅರ್ಜಿ ಹಾಕಿರುವುದಿಲ್ಲ’ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಸರ್ಕಾರಿ ಕಾಲೇಜಿನಲ್ಲಿ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿಷಯಕ್ಕೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರಧ್ವಜ ಹಾರಿಸುವಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ. ಕೇಸರಿ ಬಣ್ಣ ನಮ್ಮ ರಾಷ್ಟ್ರಧ್ವಜದಲ್ಲೇ ಇದೆಯಲ್ಲ ಎಂದಿದ್ದಾರೆ.

ಇತ್ತ, ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ದೀಕ್ಷಿತ್ ’ನ್ಯಾಯಾಂಗ ನಡವಳಿಕೆಯ ಮಾದರಿಯನ್ನು ನೋಡಿದರೆ, ವೈಯಕ್ತಿಕ ಕಾನೂನುಗಳು ಅಥವಾ ಸೆಮಿನಲ್ ಕಾನೂನುಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಪೀಠಗಳನ್ನು ರಚಿಸಲಾಗಿದೆ ಆದ್ದರಿಂದ ಫಲಿತಾಂಶಗಳು ಹೆಚ್ಚು ಸ್ವೀಕಾರಾರ್ಹವಾಗಿರುತ್ತವೆ. ಪೀಠ ರಚನೆಗೆ ತನ್ನದೇ ಆದ ಸಮಯ ತೆಗೆದುಕೊಳ್ಳುತ್ತದೆ ಎಂಬ ಅನಿಸಿಕೆಗೆ ಒಳಗಾಗಬೇಡಿ. ಈ ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.


ಇದನ್ನೂ ಓದಿ: Hijab Live | ಹಿಜಾಬ್‌‌ ಅರ್ಜಿ ವಿಚಾರಣೆ ಲೈವ್‌‌ | ಪ್ರಕರಣವನ್ನು ವಿಸ್ತೃತ ಪೀಠದಿಂದ ವಿಚಾರಣೆ ನಡೆಸಬೇಕು: ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....