Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...