Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...