Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...