Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...