Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...