Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...