Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....