Homeಮುಖಪುಟಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

- Advertisement -
- Advertisement -

ಭೋಪಾಲ್: ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿವಾದವು ಕರ್ನಾಟಕ ರಾಜ್ಯದ ಗಡಿಯನ್ನು ದಾಟಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಪುದುಚೇರಿಯಲ್ಲಿಯೂ ಇದೇ ವಿವಾದ ಸೃಷ್ಟಿಯಾಗುವ ಸೂಚನೆಗಳು ಬಂದಿವೆ.

ಹಿಜಾಬ್‌‌ ಪರವಾಗಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿರುವುದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಶಾಂತಿಯನ್ನು ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಇದರ ನಡುವೆ ಮಧ್ಯಪ್ರದೇಶದ ಮಂತ್ರಿಯೊಬ್ಬರು ‘ಶಿಸ್ತು’ ಮತ್ತು ‘ಏಕರೂಪದ ಡ್ರೆಸ್ ಕೋಡ್’ ಬಗ್ಗೆ ನಿಯಮ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಹಿಜಾಬ್‌ ಧರಿಸುವುದನ್ನು ಪುದುಚೆರಿಯಲ್ಲಿ ಶಿಕ್ಷಕನೊಬ್ಬ ಆಕ್ಷೇಪಿಸಿದ್ದಾನೆ. ಇದರ ಕುರಿತು ತನಿಖೆ ನಡೆಸುವಂತೆ ಅರಿಯಾಂಕುಪ್ಪಂನ ಸರ್ಕಾರಿ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಿಜಾಬ್ ಧರಿಸಿರುವುದನ್ನು ವಿರೋಧಿಸಿ ಎಲ್ಲೆಡೆ ಕೇಸರಿಧಾರಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದನ್ನು ಕಂಡು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಲು ಕೋರಿದ್ದರಿಂದ ಅಮಾನವೀಯವಾಗಿ ಶಾಲೆಯಿಂದ ಹೊರಗಿಡಲಾಗಿಯಿತು. ಆ ಬಳಿಕ ವಿವಾದ ಉಂಟಾಯಿತು. ಇದೇ ರೀತಿಯ ಅಮಾನವೀಯ ಘಟನೆ ಕುಂದಾಪುರ ಕಾಲೇಜಿನಲ್ಲಿ ಕಂಡು ಬಂದ ಬಳಿಕ ವಿವಾದ ಭುಗಿಲೆದ್ದಿದೆ. ಹಿಜಾಬ್‌ ವಿರೋಧಿಯಾಗಿ ಕೇಸರಿ ಶಾಲು ಧರಿಸಿ ಬರುವ ಮೂಲಕ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಹಬ್ಬುತ್ತಿದೆ.

ಇದನ್ನೂ ಓದಿರಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಹಿಜಾಬ್ ನಿಷೇಧವನ್ನು ಬೆಂಬಲಿಸಿರುವ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ಸರ್ಕಾರವು ಶಿಸ್ತಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

“ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ, ಅದಕ್ಕಾಗಿಯೇ ಅದನ್ನು ಶಾಲೆಗಳಲ್ಲಿ ಧರಿಸುವುದನ್ನು ನಿಷೇಧಿಸಬೇಕು. ಜನರು ತಮ್ಮ ಮನೆಗಳಲ್ಲಿ ಸಂಪ್ರದಾಯಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ನಾವು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅಗತ್ಯವಿದ್ದರೆ, ಈ ಬಗ್ಗೆ ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಕೋವಿಡ್ ಮಧ್ಯೆ ಶಾಲೆಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿವೆಯೋ ಎಂಬುದನ್ನು ಗಮನಿಸುವೋ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೋ ಅಥವಾ ಕೋಮು ವಿಭಜನೆಯ ಕಾರ್ಯಸೂಚಿಯನ್ನು ಅನುಸರಿಸುವುದೋ? ಯಾವುದು ತಮ್ಮ ಆದ್ಯತೆ ಎಂಬುದನ್ನು ಸಚಿವರು ತಿಳಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಒತ್ತಾಯಿಸಿದ್ದಾರೆ.

“ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರವು ಶಾಲೆಗೆ ಹೋಗುವ ಮಕ್ಕಳನ್ನೂ ಅವರ ಧಾರ್ಮಿಕ ಆಚರಣೆಗಳಿಂದ ವಂಚಿಸಲು ಪ್ರಯತ್ನಿಸುತ್ತಿದೆ. ಸಿಖ್ಖರು ಪೇಟ ಧರಿಸುವುದು ಮತ್ತು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಮೊದಲಿನಿಂದಲೂ ನಡೆದುಬಂದಿದೆ. ಆದರೆ ಈ ಸರ್ಕಾರವು ಈ ಪ್ರಾಚೀನ ಸಂಪ್ರದಾಯಗಳನ್ನು ಕೊನೆಗಾಣಿಸಲು ಬಯಸುತ್ತಿದೆ. ಇದು ಪ್ರಸ್ತುತ ಅಧಿಕಾರದಲ್ಲಿರುವವರ ಮಾನಸಿಕ ದಿವಾಳಿತನವನ್ನು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರ ನಡುವೆ ಪುದುಚೇರಿಯಲ್ಲಿ, ಶಿಕ್ಷಣ ನಿರ್ದೇಶನಾಲಯದ ವಕ್ತಾರರು, “ವಿದ್ಯಾರ್ಥಿಯು ಧರಿಸಿದ್ದ ಸ್ಕಾರ್ಫ್ ಅನ್ನು ವಿರೋಧಿಸಿದ ಶಿಕ್ಷಕನ ಬಗ್ಗೆ ವಿದ್ಯಾರ್ಥಿ ಗುಂಪುಗಳು ಮತ್ತು ಇತರ ಸಂಘಟನೆಗಳಿಂದ ದೂರುಗಳನ್ನು ಸ್ವೀಕರಿಸಲಾಗಿದೆ” ಎಂದು ಹೇಳಿದ್ದಾರೆ.

“ವಾಸ್ತವವಾಗಿ ಏನಾಯಿತು ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಶಾಲೆಯಿಂದ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು” ಎಂದು ವಕ್ತಾರರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾದ ಸ್ಥಳೀಯ ಮುಖ್ಯಸ್ಥರು, “ಬಾಲಕಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದು, ಈಗ ಆಕ್ಷೇಪಣೆ ಏಕೆ ಬಂದಿತು” ಎಂದು ಪ್ರಶ್ನಿಸಿದ್ದಾರೆ.

“ವೀರಂಪಟ್ಟಿನಂ, ಎಂಬಾಲಂ ಮತ್ತು ತಿರುಕನೂರ್‌ನ ಕೆಲವು ಶಾಲೆಗಳು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ ಆರ್‌ಎಸ್‌ಎಸ್‌ ಕಾರ್ಯಚೂಚಿಯನ್ನು ಪ್ರೋತ್ಸಾಹಿಸುತ್ತಿವೆ ಎಂಬ ದೂರುಗಳು ಬಂದಿವೆ” ಅಧಿಕಾರಿ ಹೇಳಿದ್ದಾರೆ.

“ನಾವು ಇದರ ಬಗ್ಗೆ ವಿವರವಾದ ತನಿಖೆಯನ್ನು ಬಯಸುತ್ತೇವೆ. ಅಧಿಕಾರಿಗಳ ವಿಭಾಗದ ಸಕ್ರಿಯ ಪ್ರೋತ್ಸಾಹದೊಂದಿಗೆ ಕೇಸರಿಕರಣವನ್ನು ತಡೆಯುತ್ತೇವೆ” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...