Homeಮುಖಪುಟಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

- Advertisement -
- Advertisement -

ಭೋಪಾಲ್: ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿವಾದವು ಕರ್ನಾಟಕ ರಾಜ್ಯದ ಗಡಿಯನ್ನು ದಾಟಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಪುದುಚೇರಿಯಲ್ಲಿಯೂ ಇದೇ ವಿವಾದ ಸೃಷ್ಟಿಯಾಗುವ ಸೂಚನೆಗಳು ಬಂದಿವೆ.

ಹಿಜಾಬ್‌‌ ಪರವಾಗಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿರುವುದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಶಾಂತಿಯನ್ನು ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಇದರ ನಡುವೆ ಮಧ್ಯಪ್ರದೇಶದ ಮಂತ್ರಿಯೊಬ್ಬರು ‘ಶಿಸ್ತು’ ಮತ್ತು ‘ಏಕರೂಪದ ಡ್ರೆಸ್ ಕೋಡ್’ ಬಗ್ಗೆ ನಿಯಮ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಹಿಜಾಬ್‌ ಧರಿಸುವುದನ್ನು ಪುದುಚೆರಿಯಲ್ಲಿ ಶಿಕ್ಷಕನೊಬ್ಬ ಆಕ್ಷೇಪಿಸಿದ್ದಾನೆ. ಇದರ ಕುರಿತು ತನಿಖೆ ನಡೆಸುವಂತೆ ಅರಿಯಾಂಕುಪ್ಪಂನ ಸರ್ಕಾರಿ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಿಜಾಬ್ ಧರಿಸಿರುವುದನ್ನು ವಿರೋಧಿಸಿ ಎಲ್ಲೆಡೆ ಕೇಸರಿಧಾರಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದನ್ನು ಕಂಡು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಲು ಕೋರಿದ್ದರಿಂದ ಅಮಾನವೀಯವಾಗಿ ಶಾಲೆಯಿಂದ ಹೊರಗಿಡಲಾಗಿಯಿತು. ಆ ಬಳಿಕ ವಿವಾದ ಉಂಟಾಯಿತು. ಇದೇ ರೀತಿಯ ಅಮಾನವೀಯ ಘಟನೆ ಕುಂದಾಪುರ ಕಾಲೇಜಿನಲ್ಲಿ ಕಂಡು ಬಂದ ಬಳಿಕ ವಿವಾದ ಭುಗಿಲೆದ್ದಿದೆ. ಹಿಜಾಬ್‌ ವಿರೋಧಿಯಾಗಿ ಕೇಸರಿ ಶಾಲು ಧರಿಸಿ ಬರುವ ಮೂಲಕ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಹಬ್ಬುತ್ತಿದೆ.

ಇದನ್ನೂ ಓದಿರಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಹಿಜಾಬ್ ನಿಷೇಧವನ್ನು ಬೆಂಬಲಿಸಿರುವ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ಸರ್ಕಾರವು ಶಿಸ್ತಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

“ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ, ಅದಕ್ಕಾಗಿಯೇ ಅದನ್ನು ಶಾಲೆಗಳಲ್ಲಿ ಧರಿಸುವುದನ್ನು ನಿಷೇಧಿಸಬೇಕು. ಜನರು ತಮ್ಮ ಮನೆಗಳಲ್ಲಿ ಸಂಪ್ರದಾಯಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ನಾವು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅಗತ್ಯವಿದ್ದರೆ, ಈ ಬಗ್ಗೆ ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಕೋವಿಡ್ ಮಧ್ಯೆ ಶಾಲೆಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿವೆಯೋ ಎಂಬುದನ್ನು ಗಮನಿಸುವೋ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೋ ಅಥವಾ ಕೋಮು ವಿಭಜನೆಯ ಕಾರ್ಯಸೂಚಿಯನ್ನು ಅನುಸರಿಸುವುದೋ? ಯಾವುದು ತಮ್ಮ ಆದ್ಯತೆ ಎಂಬುದನ್ನು ಸಚಿವರು ತಿಳಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಒತ್ತಾಯಿಸಿದ್ದಾರೆ.

“ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರವು ಶಾಲೆಗೆ ಹೋಗುವ ಮಕ್ಕಳನ್ನೂ ಅವರ ಧಾರ್ಮಿಕ ಆಚರಣೆಗಳಿಂದ ವಂಚಿಸಲು ಪ್ರಯತ್ನಿಸುತ್ತಿದೆ. ಸಿಖ್ಖರು ಪೇಟ ಧರಿಸುವುದು ಮತ್ತು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಮೊದಲಿನಿಂದಲೂ ನಡೆದುಬಂದಿದೆ. ಆದರೆ ಈ ಸರ್ಕಾರವು ಈ ಪ್ರಾಚೀನ ಸಂಪ್ರದಾಯಗಳನ್ನು ಕೊನೆಗಾಣಿಸಲು ಬಯಸುತ್ತಿದೆ. ಇದು ಪ್ರಸ್ತುತ ಅಧಿಕಾರದಲ್ಲಿರುವವರ ಮಾನಸಿಕ ದಿವಾಳಿತನವನ್ನು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರ ನಡುವೆ ಪುದುಚೇರಿಯಲ್ಲಿ, ಶಿಕ್ಷಣ ನಿರ್ದೇಶನಾಲಯದ ವಕ್ತಾರರು, “ವಿದ್ಯಾರ್ಥಿಯು ಧರಿಸಿದ್ದ ಸ್ಕಾರ್ಫ್ ಅನ್ನು ವಿರೋಧಿಸಿದ ಶಿಕ್ಷಕನ ಬಗ್ಗೆ ವಿದ್ಯಾರ್ಥಿ ಗುಂಪುಗಳು ಮತ್ತು ಇತರ ಸಂಘಟನೆಗಳಿಂದ ದೂರುಗಳನ್ನು ಸ್ವೀಕರಿಸಲಾಗಿದೆ” ಎಂದು ಹೇಳಿದ್ದಾರೆ.

“ವಾಸ್ತವವಾಗಿ ಏನಾಯಿತು ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಶಾಲೆಯಿಂದ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು” ಎಂದು ವಕ್ತಾರರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾದ ಸ್ಥಳೀಯ ಮುಖ್ಯಸ್ಥರು, “ಬಾಲಕಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದು, ಈಗ ಆಕ್ಷೇಪಣೆ ಏಕೆ ಬಂದಿತು” ಎಂದು ಪ್ರಶ್ನಿಸಿದ್ದಾರೆ.

“ವೀರಂಪಟ್ಟಿನಂ, ಎಂಬಾಲಂ ಮತ್ತು ತಿರುಕನೂರ್‌ನ ಕೆಲವು ಶಾಲೆಗಳು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ ಆರ್‌ಎಸ್‌ಎಸ್‌ ಕಾರ್ಯಚೂಚಿಯನ್ನು ಪ್ರೋತ್ಸಾಹಿಸುತ್ತಿವೆ ಎಂಬ ದೂರುಗಳು ಬಂದಿವೆ” ಅಧಿಕಾರಿ ಹೇಳಿದ್ದಾರೆ.

“ನಾವು ಇದರ ಬಗ್ಗೆ ವಿವರವಾದ ತನಿಖೆಯನ್ನು ಬಯಸುತ್ತೇವೆ. ಅಧಿಕಾರಿಗಳ ವಿಭಾಗದ ಸಕ್ರಿಯ ಪ್ರೋತ್ಸಾಹದೊಂದಿಗೆ ಕೇಸರಿಕರಣವನ್ನು ತಡೆಯುತ್ತೇವೆ” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...