Homeಮುಖಪುಟಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

- Advertisement -
- Advertisement -

ಭೋಪಾಲ್: ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿವಾದವು ಕರ್ನಾಟಕ ರಾಜ್ಯದ ಗಡಿಯನ್ನು ದಾಟಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಪುದುಚೇರಿಯಲ್ಲಿಯೂ ಇದೇ ವಿವಾದ ಸೃಷ್ಟಿಯಾಗುವ ಸೂಚನೆಗಳು ಬಂದಿವೆ.

ಹಿಜಾಬ್‌‌ ಪರವಾಗಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿರುವುದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಶಾಂತಿಯನ್ನು ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಇದರ ನಡುವೆ ಮಧ್ಯಪ್ರದೇಶದ ಮಂತ್ರಿಯೊಬ್ಬರು ‘ಶಿಸ್ತು’ ಮತ್ತು ‘ಏಕರೂಪದ ಡ್ರೆಸ್ ಕೋಡ್’ ಬಗ್ಗೆ ನಿಯಮ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಹಿಜಾಬ್‌ ಧರಿಸುವುದನ್ನು ಪುದುಚೆರಿಯಲ್ಲಿ ಶಿಕ್ಷಕನೊಬ್ಬ ಆಕ್ಷೇಪಿಸಿದ್ದಾನೆ. ಇದರ ಕುರಿತು ತನಿಖೆ ನಡೆಸುವಂತೆ ಅರಿಯಾಂಕುಪ್ಪಂನ ಸರ್ಕಾರಿ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಿಜಾಬ್ ಧರಿಸಿರುವುದನ್ನು ವಿರೋಧಿಸಿ ಎಲ್ಲೆಡೆ ಕೇಸರಿಧಾರಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದನ್ನು ಕಂಡು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಲು ಕೋರಿದ್ದರಿಂದ ಅಮಾನವೀಯವಾಗಿ ಶಾಲೆಯಿಂದ ಹೊರಗಿಡಲಾಗಿಯಿತು. ಆ ಬಳಿಕ ವಿವಾದ ಉಂಟಾಯಿತು. ಇದೇ ರೀತಿಯ ಅಮಾನವೀಯ ಘಟನೆ ಕುಂದಾಪುರ ಕಾಲೇಜಿನಲ್ಲಿ ಕಂಡು ಬಂದ ಬಳಿಕ ವಿವಾದ ಭುಗಿಲೆದ್ದಿದೆ. ಹಿಜಾಬ್‌ ವಿರೋಧಿಯಾಗಿ ಕೇಸರಿ ಶಾಲು ಧರಿಸಿ ಬರುವ ಮೂಲಕ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಹಬ್ಬುತ್ತಿದೆ.

ಇದನ್ನೂ ಓದಿರಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಹಿಜಾಬ್ ನಿಷೇಧವನ್ನು ಬೆಂಬಲಿಸಿರುವ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ಸರ್ಕಾರವು ಶಿಸ್ತಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

“ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ, ಅದಕ್ಕಾಗಿಯೇ ಅದನ್ನು ಶಾಲೆಗಳಲ್ಲಿ ಧರಿಸುವುದನ್ನು ನಿಷೇಧಿಸಬೇಕು. ಜನರು ತಮ್ಮ ಮನೆಗಳಲ್ಲಿ ಸಂಪ್ರದಾಯಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ನಾವು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅಗತ್ಯವಿದ್ದರೆ, ಈ ಬಗ್ಗೆ ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಕೋವಿಡ್ ಮಧ್ಯೆ ಶಾಲೆಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿವೆಯೋ ಎಂಬುದನ್ನು ಗಮನಿಸುವೋ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೋ ಅಥವಾ ಕೋಮು ವಿಭಜನೆಯ ಕಾರ್ಯಸೂಚಿಯನ್ನು ಅನುಸರಿಸುವುದೋ? ಯಾವುದು ತಮ್ಮ ಆದ್ಯತೆ ಎಂಬುದನ್ನು ಸಚಿವರು ತಿಳಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಒತ್ತಾಯಿಸಿದ್ದಾರೆ.

“ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರವು ಶಾಲೆಗೆ ಹೋಗುವ ಮಕ್ಕಳನ್ನೂ ಅವರ ಧಾರ್ಮಿಕ ಆಚರಣೆಗಳಿಂದ ವಂಚಿಸಲು ಪ್ರಯತ್ನಿಸುತ್ತಿದೆ. ಸಿಖ್ಖರು ಪೇಟ ಧರಿಸುವುದು ಮತ್ತು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಮೊದಲಿನಿಂದಲೂ ನಡೆದುಬಂದಿದೆ. ಆದರೆ ಈ ಸರ್ಕಾರವು ಈ ಪ್ರಾಚೀನ ಸಂಪ್ರದಾಯಗಳನ್ನು ಕೊನೆಗಾಣಿಸಲು ಬಯಸುತ್ತಿದೆ. ಇದು ಪ್ರಸ್ತುತ ಅಧಿಕಾರದಲ್ಲಿರುವವರ ಮಾನಸಿಕ ದಿವಾಳಿತನವನ್ನು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರ ನಡುವೆ ಪುದುಚೇರಿಯಲ್ಲಿ, ಶಿಕ್ಷಣ ನಿರ್ದೇಶನಾಲಯದ ವಕ್ತಾರರು, “ವಿದ್ಯಾರ್ಥಿಯು ಧರಿಸಿದ್ದ ಸ್ಕಾರ್ಫ್ ಅನ್ನು ವಿರೋಧಿಸಿದ ಶಿಕ್ಷಕನ ಬಗ್ಗೆ ವಿದ್ಯಾರ್ಥಿ ಗುಂಪುಗಳು ಮತ್ತು ಇತರ ಸಂಘಟನೆಗಳಿಂದ ದೂರುಗಳನ್ನು ಸ್ವೀಕರಿಸಲಾಗಿದೆ” ಎಂದು ಹೇಳಿದ್ದಾರೆ.

“ವಾಸ್ತವವಾಗಿ ಏನಾಯಿತು ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಶಾಲೆಯಿಂದ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು” ಎಂದು ವಕ್ತಾರರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾದ ಸ್ಥಳೀಯ ಮುಖ್ಯಸ್ಥರು, “ಬಾಲಕಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದು, ಈಗ ಆಕ್ಷೇಪಣೆ ಏಕೆ ಬಂದಿತು” ಎಂದು ಪ್ರಶ್ನಿಸಿದ್ದಾರೆ.

“ವೀರಂಪಟ್ಟಿನಂ, ಎಂಬಾಲಂ ಮತ್ತು ತಿರುಕನೂರ್‌ನ ಕೆಲವು ಶಾಲೆಗಳು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ ಆರ್‌ಎಸ್‌ಎಸ್‌ ಕಾರ್ಯಚೂಚಿಯನ್ನು ಪ್ರೋತ್ಸಾಹಿಸುತ್ತಿವೆ ಎಂಬ ದೂರುಗಳು ಬಂದಿವೆ” ಅಧಿಕಾರಿ ಹೇಳಿದ್ದಾರೆ.

“ನಾವು ಇದರ ಬಗ್ಗೆ ವಿವರವಾದ ತನಿಖೆಯನ್ನು ಬಯಸುತ್ತೇವೆ. ಅಧಿಕಾರಿಗಳ ವಿಭಾಗದ ಸಕ್ರಿಯ ಪ್ರೋತ್ಸಾಹದೊಂದಿಗೆ ಕೇಸರಿಕರಣವನ್ನು ತಡೆಯುತ್ತೇವೆ” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...