Homeಮುಖಪುಟಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

- Advertisement -
- Advertisement -

ಭೋಪಾಲ್: ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿವಾದವು ಕರ್ನಾಟಕ ರಾಜ್ಯದ ಗಡಿಯನ್ನು ದಾಟಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಪುದುಚೇರಿಯಲ್ಲಿಯೂ ಇದೇ ವಿವಾದ ಸೃಷ್ಟಿಯಾಗುವ ಸೂಚನೆಗಳು ಬಂದಿವೆ.

ಹಿಜಾಬ್‌‌ ಪರವಾಗಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿರುವುದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಶಾಂತಿಯನ್ನು ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಇದರ ನಡುವೆ ಮಧ್ಯಪ್ರದೇಶದ ಮಂತ್ರಿಯೊಬ್ಬರು ‘ಶಿಸ್ತು’ ಮತ್ತು ‘ಏಕರೂಪದ ಡ್ರೆಸ್ ಕೋಡ್’ ಬಗ್ಗೆ ನಿಯಮ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಹಿಜಾಬ್‌ ಧರಿಸುವುದನ್ನು ಪುದುಚೆರಿಯಲ್ಲಿ ಶಿಕ್ಷಕನೊಬ್ಬ ಆಕ್ಷೇಪಿಸಿದ್ದಾನೆ. ಇದರ ಕುರಿತು ತನಿಖೆ ನಡೆಸುವಂತೆ ಅರಿಯಾಂಕುಪ್ಪಂನ ಸರ್ಕಾರಿ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಿಜಾಬ್ ಧರಿಸಿರುವುದನ್ನು ವಿರೋಧಿಸಿ ಎಲ್ಲೆಡೆ ಕೇಸರಿಧಾರಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದನ್ನು ಕಂಡು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಲು ಕೋರಿದ್ದರಿಂದ ಅಮಾನವೀಯವಾಗಿ ಶಾಲೆಯಿಂದ ಹೊರಗಿಡಲಾಗಿಯಿತು. ಆ ಬಳಿಕ ವಿವಾದ ಉಂಟಾಯಿತು. ಇದೇ ರೀತಿಯ ಅಮಾನವೀಯ ಘಟನೆ ಕುಂದಾಪುರ ಕಾಲೇಜಿನಲ್ಲಿ ಕಂಡು ಬಂದ ಬಳಿಕ ವಿವಾದ ಭುಗಿಲೆದ್ದಿದೆ. ಹಿಜಾಬ್‌ ವಿರೋಧಿಯಾಗಿ ಕೇಸರಿ ಶಾಲು ಧರಿಸಿ ಬರುವ ಮೂಲಕ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಹಬ್ಬುತ್ತಿದೆ.

ಇದನ್ನೂ ಓದಿರಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಹಿಜಾಬ್ ನಿಷೇಧವನ್ನು ಬೆಂಬಲಿಸಿರುವ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ಸರ್ಕಾರವು ಶಿಸ್ತಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

“ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ, ಅದಕ್ಕಾಗಿಯೇ ಅದನ್ನು ಶಾಲೆಗಳಲ್ಲಿ ಧರಿಸುವುದನ್ನು ನಿಷೇಧಿಸಬೇಕು. ಜನರು ತಮ್ಮ ಮನೆಗಳಲ್ಲಿ ಸಂಪ್ರದಾಯಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ನಾವು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅಗತ್ಯವಿದ್ದರೆ, ಈ ಬಗ್ಗೆ ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಕೋವಿಡ್ ಮಧ್ಯೆ ಶಾಲೆಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿವೆಯೋ ಎಂಬುದನ್ನು ಗಮನಿಸುವೋ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೋ ಅಥವಾ ಕೋಮು ವಿಭಜನೆಯ ಕಾರ್ಯಸೂಚಿಯನ್ನು ಅನುಸರಿಸುವುದೋ? ಯಾವುದು ತಮ್ಮ ಆದ್ಯತೆ ಎಂಬುದನ್ನು ಸಚಿವರು ತಿಳಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಒತ್ತಾಯಿಸಿದ್ದಾರೆ.

“ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರವು ಶಾಲೆಗೆ ಹೋಗುವ ಮಕ್ಕಳನ್ನೂ ಅವರ ಧಾರ್ಮಿಕ ಆಚರಣೆಗಳಿಂದ ವಂಚಿಸಲು ಪ್ರಯತ್ನಿಸುತ್ತಿದೆ. ಸಿಖ್ಖರು ಪೇಟ ಧರಿಸುವುದು ಮತ್ತು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಮೊದಲಿನಿಂದಲೂ ನಡೆದುಬಂದಿದೆ. ಆದರೆ ಈ ಸರ್ಕಾರವು ಈ ಪ್ರಾಚೀನ ಸಂಪ್ರದಾಯಗಳನ್ನು ಕೊನೆಗಾಣಿಸಲು ಬಯಸುತ್ತಿದೆ. ಇದು ಪ್ರಸ್ತುತ ಅಧಿಕಾರದಲ್ಲಿರುವವರ ಮಾನಸಿಕ ದಿವಾಳಿತನವನ್ನು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರ ನಡುವೆ ಪುದುಚೇರಿಯಲ್ಲಿ, ಶಿಕ್ಷಣ ನಿರ್ದೇಶನಾಲಯದ ವಕ್ತಾರರು, “ವಿದ್ಯಾರ್ಥಿಯು ಧರಿಸಿದ್ದ ಸ್ಕಾರ್ಫ್ ಅನ್ನು ವಿರೋಧಿಸಿದ ಶಿಕ್ಷಕನ ಬಗ್ಗೆ ವಿದ್ಯಾರ್ಥಿ ಗುಂಪುಗಳು ಮತ್ತು ಇತರ ಸಂಘಟನೆಗಳಿಂದ ದೂರುಗಳನ್ನು ಸ್ವೀಕರಿಸಲಾಗಿದೆ” ಎಂದು ಹೇಳಿದ್ದಾರೆ.

“ವಾಸ್ತವವಾಗಿ ಏನಾಯಿತು ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಶಾಲೆಯಿಂದ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು” ಎಂದು ವಕ್ತಾರರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾದ ಸ್ಥಳೀಯ ಮುಖ್ಯಸ್ಥರು, “ಬಾಲಕಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದು, ಈಗ ಆಕ್ಷೇಪಣೆ ಏಕೆ ಬಂದಿತು” ಎಂದು ಪ್ರಶ್ನಿಸಿದ್ದಾರೆ.

“ವೀರಂಪಟ್ಟಿನಂ, ಎಂಬಾಲಂ ಮತ್ತು ತಿರುಕನೂರ್‌ನ ಕೆಲವು ಶಾಲೆಗಳು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ ಆರ್‌ಎಸ್‌ಎಸ್‌ ಕಾರ್ಯಚೂಚಿಯನ್ನು ಪ್ರೋತ್ಸಾಹಿಸುತ್ತಿವೆ ಎಂಬ ದೂರುಗಳು ಬಂದಿವೆ” ಅಧಿಕಾರಿ ಹೇಳಿದ್ದಾರೆ.

“ನಾವು ಇದರ ಬಗ್ಗೆ ವಿವರವಾದ ತನಿಖೆಯನ್ನು ಬಯಸುತ್ತೇವೆ. ಅಧಿಕಾರಿಗಳ ವಿಭಾಗದ ಸಕ್ರಿಯ ಪ್ರೋತ್ಸಾಹದೊಂದಿಗೆ ಕೇಸರಿಕರಣವನ್ನು ತಡೆಯುತ್ತೇವೆ” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...