Homeಕರ್ನಾಟಕಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್- ಕೇಸರಿ ವಿವಾದದಲ್ಲಿ ಮುನ್ನೆಲೆಗೆ ಬಂದ ಮುಸ್ಲಿಂ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ವಿಭಾಗವಾದ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ. ಆದರೆ, ಇದೆ ಆರ್‌ಎಸ್‌ಎಸ್‌ನ ಮುಖಂಡರೊಬ್ಬರು ಆಕೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ.

‘ಪರ್ದಾ’ ಭಾರತೀಯ ಸಂಸ್ಕೃತಿಯ ಭಾಗ ಎಂದು ಹೇಳುವ ಮೂಲಕ ಮಂಡ್ಯದ ಕಾಲೇಜಿನಲ್ಲಿ ಯುವಕರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ.

“ಬೀಬಿ ಮುಸ್ಕಾನ್ ಖಾನ್‌ ನಮ್ಮ ಸಮುದಾಯದ ಮಗಳು ಮತ್ತು ಸಹೋದರಿ, ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಅವರ ಪರ ನಿಲ್ಲುತ್ತೇವೆ” ಎಂದು ಎಂಆರ್‌ಎಂನ ಪ್ರಾಂತ ಸಂಚಾಲಕ ಅನಿಲ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐಗೆ ನೀಡಿರುವ ಹೇಳಿಕೆಯಲ್ಲಿ, “ಹಿಂದೂ ಸಂಸ್ಕೃತಿಯು ಮಹಿಳೆಯರಿಗೆ ಗೌರವವನ್ನು ಕಲಿಸುತ್ತದೆ. ಆದರೆ, ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಆ ವಿದ್ಯಾರ್ಥಿನಿಯನ್ನು ಬೆದರಿಸಲು ಪ್ರಯತ್ನಿಸಿದ್ದು ತಪ್ಪು. ದೇಶದ ಸಂವಿಧಾನವು ಹೆಣ್ಣು ಮಗುವಿಗೆ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಬಾಲಕಿ ತಾನು ಓದುತ್ತಿರುವ ಸಂಸ್ಥೆಯ ಯಾವುದೇ ವಸ್ತ್ರ ಸಂಹಿತಿಯನ್ನು ಉಲ್ಲಂಘಿಸಿದ್ದರೆ ಮಾತ್ರ ಸಂಸ್ಥೆ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

“ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ಸಮಾಜದ ಒಂದು ಭಾಗವಾದ ‘ಪರ್ದಾ’ ಆಗಿದೆ. ನಮ್ಮ ಸಮಾಜದಲ್ಲಿ ಹಿಂದೂ ಮಹಿಳೆಯರು ಕೂಡ ವ್ಯಕ್ತಿಗೆ ಅನುಗುಣವಾಗಿ ‘ಪರ್ದಾ’ ಧರಿಸುತ್ತಾರೆ. ಹಿಂದೂ ಮಹಿಳೆಯರು ತಮ್ಮ ಡ್ರೆಸ್ ಕೋಡ್ ಅನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರಾಗಿದ್ದರೆ, ಇದು ಬೀಬಿ ಮುಸ್ಕಾನ್ ಅವರಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

“ಮುಸ್ಲಿಮರು ನಮ್ಮ ಸಹೋದರರು. ಎರಡೂ ಸಮುದಾಯಗಳ ಡಿಎನ್ಎ ಒಂದೇ ಎಂದು ನಮ್ಮ ಸಂಘದ ಮುಖಂಡರು (sarsangh chalak) ಹೇಳಿದ್ದಾರೆ. ಹಾಗಾಗಿ ಮುಸ್ಲಿಮರನ್ನು ತಮ್ಮ ಸಹೋದರ ಸಹೋದರಿಯರಂತೆ ಸ್ವೀಕರಿಸುವಂತೆ ಹಿಂದೂ ಸಮುದಾಯದ ಎಲ್ಲ ಸದಸ್ಯರಿಗೆ ನಾನು ಮನವಿ ಮಾಡುತ್ತೇನೆ” ಎಂದು ಅನಿಲ್ ಸಿಂಗ್ ಹೇಳಿದ್ದಾರೆ.

ಇತ್ತ, ಇದೆ ಘಟನೆಗೆ ತದ್ವಿರುದ್ಧ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್, ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಅವರನ್ನು ಖಂಡಿಸಿದ್ದು, ರಾಜ್ಯದಲ್ಲಿ ಶಾಂತಿ ಕದಡಲು ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: BREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

“ಯಾವಾಗಲೂ ಜೀನ್ಸ್ ಧರಿಸುವ ಮುಸ್ಕಾನ್ ಖಾನ್, ರಾಜ್ಯದಲ್ಲಿನ ಶಾಂತಿಯುತ ವಾತಾವರಣವನ್ನು ಕದಡುವ ಪಿತೂರಿಯ ಭಾಗವಾಗಿ ಹಿಜಾಬ್ ಧರಿಸಿ ಪ್ರತಿಭಟಿಸಿದ್ದಾರೆ” ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

“ಮುಸ್ಕಾನ್ ಖಾನ್ ಯಾವಾಗಲೂ ಜೀನ್ಸ್ ಧರಿಸುತ್ತಾರೆ. ಅವರಿ ಇಂತಹ ಪಿತೂರಿ ಮಾಡಿದ್ದಾರೆ, ಇದು ಖಂಡನೀಯ. ಅವರು ಶಾಂತಿಯುತ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಕೆಲವು ಉಗ್ರಗಾಮಿಗಳು ಈ ಹೆಣ್ಣುಮಕ್ಕಳನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಇಂದ್ರೇಶ್ ಕುಮಾರ್ ‌ಆರೋಪಿಸಿದ್ದಾರೆ.

ಮಂಡ್ಯ ಪಿಇಎಸ್‌ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೆಲವು ಕೇಸರಿ ಶಾಲುಧಾರಿಗಳು, ಬುರ್ಖಾ ಧರಿಸಿ ಕಾಲೇಜು ಆವರಣಕ್ಕೆ ಬಂದ ಬೀಬಿ ಮುಸ್ಕಾನ್‌ ಅವರನ್ನು ಕಂಡ ಕೂಡಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಹಿಂಬಾಲಿಸಿದ್ದರು. ಇದಕ್ಕೆ ತಕ್ಷಣದ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಆಕೆಯ ಪ್ರತಿರೋಧ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೀರ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಗೆ ಧನ್ಯವಾದಗಳು ಮತ್ತು ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...