Homeಕರ್ನಾಟಕಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್- ಕೇಸರಿ ವಿವಾದದಲ್ಲಿ ಮುನ್ನೆಲೆಗೆ ಬಂದ ಮುಸ್ಲಿಂ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ವಿಭಾಗವಾದ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ. ಆದರೆ, ಇದೆ ಆರ್‌ಎಸ್‌ಎಸ್‌ನ ಮುಖಂಡರೊಬ್ಬರು ಆಕೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ.

‘ಪರ್ದಾ’ ಭಾರತೀಯ ಸಂಸ್ಕೃತಿಯ ಭಾಗ ಎಂದು ಹೇಳುವ ಮೂಲಕ ಮಂಡ್ಯದ ಕಾಲೇಜಿನಲ್ಲಿ ಯುವಕರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ.

“ಬೀಬಿ ಮುಸ್ಕಾನ್ ಖಾನ್‌ ನಮ್ಮ ಸಮುದಾಯದ ಮಗಳು ಮತ್ತು ಸಹೋದರಿ, ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಅವರ ಪರ ನಿಲ್ಲುತ್ತೇವೆ” ಎಂದು ಎಂಆರ್‌ಎಂನ ಪ್ರಾಂತ ಸಂಚಾಲಕ ಅನಿಲ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐಗೆ ನೀಡಿರುವ ಹೇಳಿಕೆಯಲ್ಲಿ, “ಹಿಂದೂ ಸಂಸ್ಕೃತಿಯು ಮಹಿಳೆಯರಿಗೆ ಗೌರವವನ್ನು ಕಲಿಸುತ್ತದೆ. ಆದರೆ, ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಆ ವಿದ್ಯಾರ್ಥಿನಿಯನ್ನು ಬೆದರಿಸಲು ಪ್ರಯತ್ನಿಸಿದ್ದು ತಪ್ಪು. ದೇಶದ ಸಂವಿಧಾನವು ಹೆಣ್ಣು ಮಗುವಿಗೆ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಬಾಲಕಿ ತಾನು ಓದುತ್ತಿರುವ ಸಂಸ್ಥೆಯ ಯಾವುದೇ ವಸ್ತ್ರ ಸಂಹಿತಿಯನ್ನು ಉಲ್ಲಂಘಿಸಿದ್ದರೆ ಮಾತ್ರ ಸಂಸ್ಥೆ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

“ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ಸಮಾಜದ ಒಂದು ಭಾಗವಾದ ‘ಪರ್ದಾ’ ಆಗಿದೆ. ನಮ್ಮ ಸಮಾಜದಲ್ಲಿ ಹಿಂದೂ ಮಹಿಳೆಯರು ಕೂಡ ವ್ಯಕ್ತಿಗೆ ಅನುಗುಣವಾಗಿ ‘ಪರ್ದಾ’ ಧರಿಸುತ್ತಾರೆ. ಹಿಂದೂ ಮಹಿಳೆಯರು ತಮ್ಮ ಡ್ರೆಸ್ ಕೋಡ್ ಅನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರಾಗಿದ್ದರೆ, ಇದು ಬೀಬಿ ಮುಸ್ಕಾನ್ ಅವರಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

“ಮುಸ್ಲಿಮರು ನಮ್ಮ ಸಹೋದರರು. ಎರಡೂ ಸಮುದಾಯಗಳ ಡಿಎನ್ಎ ಒಂದೇ ಎಂದು ನಮ್ಮ ಸಂಘದ ಮುಖಂಡರು (sarsangh chalak) ಹೇಳಿದ್ದಾರೆ. ಹಾಗಾಗಿ ಮುಸ್ಲಿಮರನ್ನು ತಮ್ಮ ಸಹೋದರ ಸಹೋದರಿಯರಂತೆ ಸ್ವೀಕರಿಸುವಂತೆ ಹಿಂದೂ ಸಮುದಾಯದ ಎಲ್ಲ ಸದಸ್ಯರಿಗೆ ನಾನು ಮನವಿ ಮಾಡುತ್ತೇನೆ” ಎಂದು ಅನಿಲ್ ಸಿಂಗ್ ಹೇಳಿದ್ದಾರೆ.

ಇತ್ತ, ಇದೆ ಘಟನೆಗೆ ತದ್ವಿರುದ್ಧ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್, ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಅವರನ್ನು ಖಂಡಿಸಿದ್ದು, ರಾಜ್ಯದಲ್ಲಿ ಶಾಂತಿ ಕದಡಲು ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: BREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

“ಯಾವಾಗಲೂ ಜೀನ್ಸ್ ಧರಿಸುವ ಮುಸ್ಕಾನ್ ಖಾನ್, ರಾಜ್ಯದಲ್ಲಿನ ಶಾಂತಿಯುತ ವಾತಾವರಣವನ್ನು ಕದಡುವ ಪಿತೂರಿಯ ಭಾಗವಾಗಿ ಹಿಜಾಬ್ ಧರಿಸಿ ಪ್ರತಿಭಟಿಸಿದ್ದಾರೆ” ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

“ಮುಸ್ಕಾನ್ ಖಾನ್ ಯಾವಾಗಲೂ ಜೀನ್ಸ್ ಧರಿಸುತ್ತಾರೆ. ಅವರಿ ಇಂತಹ ಪಿತೂರಿ ಮಾಡಿದ್ದಾರೆ, ಇದು ಖಂಡನೀಯ. ಅವರು ಶಾಂತಿಯುತ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಕೆಲವು ಉಗ್ರಗಾಮಿಗಳು ಈ ಹೆಣ್ಣುಮಕ್ಕಳನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಇಂದ್ರೇಶ್ ಕುಮಾರ್ ‌ಆರೋಪಿಸಿದ್ದಾರೆ.

ಮಂಡ್ಯ ಪಿಇಎಸ್‌ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೆಲವು ಕೇಸರಿ ಶಾಲುಧಾರಿಗಳು, ಬುರ್ಖಾ ಧರಿಸಿ ಕಾಲೇಜು ಆವರಣಕ್ಕೆ ಬಂದ ಬೀಬಿ ಮುಸ್ಕಾನ್‌ ಅವರನ್ನು ಕಂಡ ಕೂಡಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಹಿಂಬಾಲಿಸಿದ್ದರು. ಇದಕ್ಕೆ ತಕ್ಷಣದ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಆಕೆಯ ಪ್ರತಿರೋಧ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೀರ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಗೆ ಧನ್ಯವಾದಗಳು ಮತ್ತು ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...