Homeಮುಖಪುಟಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳನ್ನು ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಇಂದು ಶಿವಮೊಗ್ಗ ಮತ್ತು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಒಂಟಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿದ ಕೇಸರಿ ಶಾಲು ಧರಿಸಿದ್ದ ಕೆಲವು ಮಂದಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿನಿಯರು ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಿಇಎಸ್‌ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್-ಕೇಸರಿ ಶಾಲು ವಿವಾದ ಜೋರಾಗಿತ್ತು. ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಕುಳಿತಿದ್ದ ಹಲವರು, ಕಾಲೇಜು ಆವರಣದಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯನ್ನು ಕಂಡ ತಕ್ಷಣವೇ ಆಕೆಯನ್ನು ಗುರಿಯಾಗಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಆಕೆಯನ್ನು ಸುತ್ತುವರೆಯಲು ಪ್ರಯತ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದಾರೆ. ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿಗಳನ್ನು ತಡೆಯಲು ಉಪನ್ಯಾಸಕರು ಹರ ಸಾಹಸ ಪಟ್ಟಿದ್ದಾರೆ. ಆದರೂ ಆಕೆಯನ್ನು ಹಿಂಬಾಲಿಸಿ ಆಕೆ ತರಗತಿಗೆ ಹೋಗುವವರೆಗೂ ಘೋಷಣೆ ಕೂಗಿದ್ದಾರೆ. ಬಳಿಕ ಉಪನ್ಯಾಸಕರ ಮಾತಿಗು ಒಪ್ಪದೆ ಅವರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಇತ್ತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿಯೂ ಬುರ್ಖಾ ತೊಟ್ಟ ಮುಸ್ಲಿಂ ವಿದ್ಯಾರ್ಥಿನಿಯನ್ನು ಸುತ್ತುವರೆದು ಕೇಸರಿ ಶಾಲುಧಾರಿಗಳು ದೌರ್ಜನ್ಯವೆಸಗಿದ್ದಾರೆ. ಆಕೆ ದಿಟ್ಟತನದಿಂದ ಉತ್ತರ ನೀಡಿದ್ದಾರೆ.

ಈ ಕುರಿತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವ್ನನು ಹಂಚಿಕೊಂಡಿದ್ದು, ಹೈಕೋರ್ಟ್ ಮಧ್ಯಪ್ರವೇಶಿಸಲು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳು ತಮ್ಮ ಸಹಪಾಠಿಗಳಿಂದ ಕಿರುಕುಳ, ಬೆದರಿಸುವಿಕೆ, ಅಪಮಾನ ಮತ್ತು ಅವಮಾನಕ್ಕೆ ಒಳಗಾಗುತ್ತಿದ್ದಾರೆ. ನಮ್ಮ ಕಣ್ಣ ಮುಂದೆ ಏನಾಗುತ್ತಿದೆ ಎಂಬುದನ್ನು ನೋಡಲು ಅಸಹ್ಯಕರವಾಗಿದೆ, ಬಿಜೆಪಿಯು ಮಕ್ಕಳಲ್ಲೂ ನೈತಿಕತೆಯನ್ನು ನಾಶಪಡಿಸಿದೆ. ಕೂಡಲೇ ಹೈಕೋರ್ಟ್ ಮಧ್ಯಪ್ರವೇಶಿಸಲಿ ಎಂದು ಹೇಳಿದ್ದಾರೆ.

ಇನ್ನು ಘರ್ಷಣೆ ಹೆಚ್ಚಾದ ಹಿನ್ನೆಲೆ ತುರ್ತು ಸಭೆ ನಡೆಸಿದ ಉಡುಪಿಯ ಎಂಜಿಎಂ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ಅನಿರ್ಧಿಷ್ಠಾವಧಿ ರಜೆ ಘೊಷಿಸಿದೆ. ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಲೇಜು ಸೂಚನೆ ನೀಡುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು ಎಂದು ಆಡಳಿತ ಮಂಡಳಿ ತಿಳಿಸಿದೆ.


ಇದನ್ನೂ ಓದಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...