Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...