Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....