Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...