Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...